September 19, 2024

C.T.Ravi goes door-to-door begging: ಮನೆ-ಮನೆಗೆ ತೆರಳಿ ಶಾಸಕ, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಿಕ್ಷಾಟನೆ

0

????????????????????????????????????

ಚಿಕ್ಕಮಗಳೂರು: ದತ್ತಜಯಂತಿ (Datta Jayanti) ಹಿನ್ನೆಲೆ ಶಾಸಕ, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T Ravi) ಮನೆ-ಮನೆಗೆ ತೆರಳಿ ಭಿಕ್ಷಾಟನೆ (Ritual Begging) ನಡೆಸಿದ್ದಾರೆ.

ಪಡಿ ಸಂಗ್ರಹಕ್ಕೆ ಶಾಸಕ ಸಿ.ಟಿ. ರವಿಗೆ 20ಕ್ಕೂ ಹೆಚ್ಚು ಮಾಲಾಧಾರಿಗಳು ಸಾಥ್ ನೀಡಿದ್ದಾರೆ. ದತ್ತಪೀಠಕ್ಕೆ ಸಚಿವ ಸುನಿಲ್ ಕುಮಾರ್ (Sunil Kumar) ಭೇಟಿ ನೀಡಿ ದತ್ತಪಾದುಕೆ ದರ್ಶನ ಮಾಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷದ ದತ್ತಜಯಂತಿ ಅತ್ಯಂತ ಸಂತೋಷ ಹಾಗೂ ಸಂಭ್ರಮದಿಂದ ಕೂಡಿದೆ. ಇಷ್ಟು ದಿನ ದತ್ತಾತ್ರೇಯರ ಪಾದುಕೆ ದರ್ಶನ ಮಾಡಿಕೊಂಡು ಹೋಗುತ್ತಿದ್ದೇವು. ಆದರೆ, ಈ ವರ್ಷ ದತ್ತಪಾದುಕೆ ದರ್ಶನದ ಜೊತೆ ಹಿಂದೂ ಅರ್ಚಕರಿಂದ ಪೂಜೆ, ಮಂಗಳಾರತಿಯನ್ನು ನೋಡುವ ಭಾಗ್ಯ ಲಭಿಸಿದೆ.

ಹಾಗಾಗಿ, ಈ ವರ್ಷದ ದತ್ತಜಯಂತಿ ಹಿಂದೂ ಸಮುದಾಯ ಮತ್ತು ದತ್ತಭಕ್ತರಿಗೆ ಅತ್ಯಂತ ಸಂತಸದ ದಿನ. ಹಲವು ವರ್ಷಗಳಿಂದ ನಮ್ಮ ಬೇಡಿಕೆ ಇದ್ದದ್ದೆ ದತ್ತಾತ್ರೇಯರ ಪಾದುಕೆಗಳಿಗೆ ಹಿಂದೂ ಅರ್ಚಕರಿಂದ ಪೂಜೆ ಜೊತೆ, ತ್ರಿಕಾಲ ಪೂಜೆ ಆಗಬೇಕು ಎಂದು ಬೇಡಿಕೆ ಇಟ್ಟಿದ್ದೆವು. ಅದರಿಂದ ಬಿಜೆಪಿ ಸರ್ಕಾರ ಇಂದು ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಿಸಿ ಹಿಂದೂ ಅರ್ಚಕರಿಂದ ಪೂಜೆ ನೋಡಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಕಾಂತ್ ಪೈ .ಎಚ್ ಡಿ ತಮ್ಮಯ್ಯ. ದೇವರಾಜ್ ಶೆಟ್ಟಿ. ರಾಜಪ್ಪ. ನಾರಾಯಣಗೌಡ. ಉಪಚಿತರಿದ್ದರು

C.T.Ravi goes door-to-door begging

About Author

Leave a Reply

Your email address will not be published. Required fields are marked *

You may have missed