ಪ್ರವಾಸಿತಾಣಗಳಲ್ಲಿ ಶೌಚಾಲಯಗಳ ನಿರ್ಮಿಸುವಂತೆ ಮನವಿ
ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿದ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿ ದರು.
ಜಿಲ್ಲೆಯಲ್ಲಿರುವ ಅನೇಕ ಪ್ರವಾಸಿ ಸ್ಥಳಗಳಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬರುತ್ತಾರೆ. ಪ್ರವಾಸಿತಾಣಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದಿರುವುದರಿಂದಾಗಿ ಪರದಾಡುತ್ತಿದ್ದಾರೆ ಎಂದು ದೂರಿದರು.
ಶೌಚಾಲಯಗಳು ಇಲ್ಲದಿರುವುದರಿಂದಾಗಿ ಮಹಿಳೆಯರು ಪರದಾಡು ವಂತಾಗಿದೆ ಎಂದು ಹೇಳಿದರು.
ಪ್ರವಾಸಿತಾಣಗಳಲ್ಲಿ ಪ್ರವಾಸಿಗರು ನೀರಿನ ಬಾಟಲ್ಗಳನ್ನು, ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ದರು.
ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮುನಾಯಕ್, ತಾಲೂಕು ಅಧ್ಯಕ್ಷ ಪ್ರಕಾಶ್, ಅಲ್ಪಸಂಖ್ಯಾತರ ಘಟಕ ದ ತಾಲೂಕು ಅಧ್ಯಕ್ಷ ಎಂ.ಡಿ.ಎನ್.ಬಾಷಾ, ಮಲ್ಲೇಶ್ ಹಾಜರಿದ್ದರು.
Karnataka Information Right Activists Organization appeals to the district administration