September 16, 2024

ಅಂಬೇಡ್ಕರ್ ಪ್ರೌಢಶಾಲೆ ಸಹ ಶಿಕ್ಷಕ ಪ್ರಭಾಕರ್‌ಗೆ ಬೀಳ್ಕೊಡಿಗೆ

0
ಸಹ ಶಿಕ್ಷಕ ಕೆ.ಆರ್.ಪ್ರಭಾಕರ್ ಅವರು ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ನಗರದ ರೋಟರಿ ಭವನದಲ್ಲಿ ಭಾನುವಾರ ಬೀಳ್ಕೊಡಿಗೆ

ಸಹ ಶಿಕ್ಷಕ ಕೆ.ಆರ್.ಪ್ರಭಾಕರ್ ಅವರು ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ನಗರದ ರೋಟರಿ ಭವನದಲ್ಲಿ ಭಾನುವಾರ ಬೀಳ್ಕೊಡಿಗೆ

ಚಿಕ್ಕಮಗಳೂರು: ತಾಲ್ಲೂಕಿನ ಮುಗುಳುವಳ್ಳಿ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹ ಶಿಕ್ಷಕ ಕೆ.ಆರ್.ಪ್ರಭಾಕರ್ ಅವರು ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ನಗರದ ರೋಟರಿ ಭವನದಲ್ಲಿ ಭಾನುವಾರ ಬೀಳ್ಕೊಡಲಾಯಿತು.

ಅಭಿನಂದೆ ಸಲ್ಲಿಸಿ ಮಾತನಾಡಿದ ವಿಧಾನ ಪರಿಷತ್ ಎಸ್.ಎಲ್.ಬೋಜೇಗೌಡ ಸರಳ ಸಜ್ಜನಿಕೆಯ ವ್ಯಕ್ತಿತ್ವ ವನ್ನು ಹೊಂದಿರುವ ಪ್ರಭಾಕರ್ ಅವರು ವೃತ್ತಿಯಲ್ಲಿ ಎಂದಿಗೂ ಜಾತಿ, ಧರ್ಮ ತಾರತಮ್ಯವೆಸಗದೇ ಕೆಲಸ ಮಾಡಿ ದವರು. ಜೊತೆಗೆ ಸಹ ಶಿಕ್ಷಕರ ಕುಂದು ಕೊರತೆಗಳನ್ನು ಆಲಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುನ್ನೆಡೆದವರು ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ಆರ್.ಪ್ರಭಾಕರ್ ಇಂದು ತಮಗೆ ಸಲ್ಲುತ್ತಿರುವ ನಿಜವಾದ ಗೌರವ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರಿಗೆ ಸಲ್ಲಿಸಿದಂತೆ. ಮುಂದಿನ ದಿನಗಳಲ್ಲಿ ವೃತ್ತಿಯಿಂದ ಹಾಗೂ ಸಂಘ ದಿಂದ ನಿವೃತ್ತಿಗೊಂಡರು ಸಹ ಸಭೆಗಳಲ್ಲಿ ಭಾಗವಹಿಸುವ ಮೂಲಕ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಜಿಲ್ಲಾ ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ.ಪಿ.ಚಂದ್ರೇಗೌಡ, ಕಾರ್ಯದರ್ಶಿ ರಾಜ್‌ಕುಮಾರ್, ಖಜಾಂಚಿ ಕೃಷ್ಣಮೂರ್ತಿ ರಾಜ್ ಅರಸ್, ಉಪಾಧ್ಯಕ್ಷ ಛಾಯಾಪತಿ, ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ಸದಸ್ಯರಾದ ವಿಶ್ವನಾಥ್ ಹಾಗೂ ಸಂಘದ ವಿವಿಧ ತಾಲ್ಲೂಕು ಅಧ್ಯಕ್ಷರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Ambedkar High School Farewell to fellow teacher Prabhakar

About Author

Leave a Reply

Your email address will not be published. Required fields are marked *