ಆ.27ಕ್ಕೆ ನಾಗಲಕ್ಷ್ಮಿಚಿತ್ರಮಂದಿರದಲ್ಲಿ ಬ್ರಹ್ಮಶ್ರೀನಾರಾಯಣ ಗುರು ಚಿತ್ರಪ್ರದರ್ಶನ
ಚಿಕ್ಕಮಗಳೂರು: ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ರಾಜಶೇಖರ್ ಕೋಟ್ಯಾನ್ ನಿರ್ಮಿಸಿ ನಿರ್ದೇಶಿಸಿ ನಟಿಸಿರುವ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಕನ್ನಡ ಚಲನಚಿತ್ರ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಆ.೨೭ ರಂದು ಭಾನುವಾರ ಬೆಳಗ್ಗೆ ೯ ಗಂಟೆಗೆ ಉಚಿತ ಪ್ರದರ್ಶನಗೊಳ್ಳಲಿದೆ
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸು ಪೂಜಾರಿ ಈ ಚಲನಚಿತ್ರ ಪ್ರದರ್ಶನಕ್ಕೆ ಬಿಲ್ಲವಈಡಿಗ, ಇಳವ ಸಮಾಜ ಬಾಂಧವರು ಶ್ರೀ ನಾರಾಯಣಗುರುಗಳ ಅನುಯಾಯಿಗಳು ಕುಟುಂಬ ಸಮೇತ ಆಗಮಿಸುವಂತೆ ಮನವಿ ಮಾಡಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ೧೫೯ನೇ ಜಯಂತಿ ಅಂಗವಾಗಿ ಅಂದು ಈ ಚಲನಚಿತ್ರ ಪ್ರದರ್ಶನ ಏರ್ಪಡಿಸಿದ್ದು, ಎಲ್ಲಾ ಸಮಾಜದ ಬಾಂಧವರು ಮತ್ತು ಕಲೆಯನ್ನು ಪ್ರೋತ್ಸಾಹಿಸುವ ಬಂಧುಗಳು ಆಗಮಿಸುವಂತೆ ಕೋರಿದರು.
ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಕೆ.ಸಿ ಗುಣಶೇಖರ್, ಗೌರವ ಅಧ್ಯಕ್ಷ ಬಿ.ವಿಠಲ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್, ಜಿಲ್ಲಾ ನಾರಾಯಣಗುರು ಸಂಘದ ಅಧ್ಯಕ್ಷ ಎಂ.ಕೃ?ಪ್ಪ, ದಾಸರಹಳ್ಳಿ ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ವಿನೋದ್ಕುಮಾರ್, ಜಿಲ್ಲಾ ಬಿಲ್ಲವ ಸಂಘದ ಉಪಾಧ್ಯಕ್ಷ ಕೃ?ಪ್ಪ ಎಸ್ ಪೂಜಾರಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
Brahmasreenarayan Guru movie screening