September 20, 2024

ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಂಜೇಗೌಡ ಆಯ್ಕೆಗೆ ಮನವಿ

0
ಕಿಸಾನ್ ಸೆಲ್ ಬ್ಲಾಕ್ ಅಧ್ಯಕ್ಷ ಸಿ.ಸಿ ಮಧುಗೌಡ

ಕಿಸಾನ್ ಸೆಲ್ ಬ್ಲಾಕ್ ಅಧ್ಯಕ್ಷ ಸಿ.ಸಿ ಮಧುಗೌಡ

ಚಿಕ್ಕಮಗಳೂರು:  ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಇವರನ್ನು ಆಯ್ಕೆ ಮಾಡಬೇಕೆಂದು ಕಿಸಾನ್ ಸೆಲ್ ಬ್ಲಾಕ್ ಅಧ್ಯಕ್ಷ ಸಿ.ಸಿ ಮಧುಗೌಡ ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಈ ವಿ?ಯ ತಿಳಿಸಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಶ್ರಮಿಸಿರುವ ಎಚ್.ಪಿ ಮಂಜೇಗೌಡರನ್ನು ಈ ಬಾರಿ ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮತ್ತು ಜಿಲ್ಲೆಯ ಎಲ್ಲಾ ಶಾಸಕರು ಮಾಜಿ ಎಂ.ಎಲ್.ಸಿ. ಗಾಯಿತ್ರಿ ಶಾಂತೇಗೌಡ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರಾದ ಡಾ||ಕೆಪಿ ಅಂಶುಮಂತ್ ಎಲ್ಲಾ ಪದಾಧಿಕಾರಿಗಳಲ್ಲಿ ಬೆಂಬಲಿಸುವಂತೆ ವಿನಂತಿಸಿದ್ದಾರೆ.

ಎಚ್‌ಪಿ ಮಂಜೇಗೌಡರು ಹಲವು ಬಾರಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಗ್ರಾ.ಪಂ ಅಧ್ಯಕ್ಷರು ಸದಸ್ಯರು ಆಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಮುಂಚೂಣಿ ನಾಯಕರಾಗಿರುವ ಇವರು ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಆಗಿದ್ದಾರೆ ಎಂದು ಹೇಳಿದ್ದಾರೆ.
ಆದ್ದರಿಂದ ಈ ಬಾರಿಯ ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಗಿರುವ ಎಚ್.ಪಿ ಮಂಜೇಗೌಡರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷದ ಹಾಗೂ ನಗರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಹಾಗೂ ಕಿಸಾನ್ ಸೆಲ್ ಘಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವರುಗಳಿಗೆ ಮನವಿ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

Petition for selection of Manje Gowda for the post of CDA President

About Author

Leave a Reply

Your email address will not be published. Required fields are marked *