ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸಿಎಂ ಕುರ್ಚಿ ಗುದ್ದಾಟ ಹಿನ್ನಲೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮ್ಯೂಸಿಕಲ್ ಚೇರ್ ಆಟ ಆಡುವ ರೀತಿ ವ್ಯಂಗ್ಯ ಪ್ರತಿಭಟನೆ ಮಾಡಿದ್ದಾರೆ.
ಸದ್ಯ ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿ ಸಂಬಂಧ ಹಲವಾರು ಸುದ್ದಿಗಳು ಸದ್ದು ಮಾಡುತ್ತಿದ್ದು, ಇಂದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಸಿಎಂ ಕುರ್ಚಿ ವಿರುದ್ಧ ವ್ಯಂಗ್ಯ ಪ್ರತಿಭಟನೆ ಮಾಡಲಾಯಿತು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ಕುರ್ಚಿ ಕದನದ ಬಗ್ಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಕುರ್ಚಿ ಖಾಲಿ, ಮಾರಾಟಕ್ಕಿದೆ ಎಂದು ಬೋರ್ಡ್ ಹಾಕಿ ಮ್ಯೂಸಿಕಲ್ ಚೇರ್ ಆಟ ಆಡುವ ರೀತಿ ವ್ಯಂಗ್ಯ ಮಾಡಿದ್ದಾರೆ.
ಸಿದ್ದು, ಡಿಕೆಶಿ, ಖರ್ಗೆ, ಸತೀಶ್ ಜಾರಕಿ ಹೊಳಿ ಭಾವಚಿತ್ರಗಳನ್ನು ಹಿಡಿದು ಮ್ಯೂಸಿಕಲ್ ಚೇರ್ ಆಟ ಆಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದು, ಮ್ಯೂಸಿಕಲ್ ಚೇರ್ನಲ್ಲಿ ಒಬ್ಬರು ಕೂತಾಗ ಉಳಿದ ಮೂವರು ಚೇರ್ ಎಳೆಯುವಂತೆ ವ್ಯಂಗ್ಯಮಾಡಿ ಪ್ರತಿಭಟನೆ ಮಾಡಲಾಯಿತು.
ಇದೇ ಪಕ್ಷ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ ಯುವ ನಿಧಿ ಯೋಜನೆಯನ್ನು ಶೀಘ್ರವೇ ಜಾರಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ನಗರಸಭೆ ಸದಸ್ಯರುಗಳು, ಮಹಿಳಾ ಮೋರ್ಚಾದ ಕಾರ್ಯಕರ್ತರು, ಯುವ ಮೋರ್ಚಾ ನಗರ ಗ್ರಾಮಾಂತರ ಮತ್ತು ಜಿಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.
BJP satirical protest against the state government