September 19, 2024

ಜಿಲ್ಲಾ ಉಸ್ತುವಾರಿ ಸಚಿವರ ದಿಟ್ಟ ನಿರ್ಧಾರಕ್ಕೆ ಜಿಲ್ಲಾ ಕಾಂಗ್ರೆಸ್ ಸ್ವಾಗತ

0
ಡಾ.ಕೆ.ಪಿ.ಅಂಶುಮಂತ್

ಡಾ.ಕೆ.ಪಿ.ಅಂಶುಮಂತ್

ಚಿಕ್ಕಮಗಳೂರು: ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ವಿವಿಧ ಪ್ರದೆಶಗಳಲ್ಲಿ ತಲೆದೋರಿರುವ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲೆಯಾದ್ಯಂತ ಜನತಾ ದರ್ಶನ ನಡೆಸಿ ಪರಿಹರಿಸಲು ಕೈಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವರ ದಿಟ್ಟ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದ್ದಾರೆ.

ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ, ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಜನತಾ ದರ್ಶನದ ಮೂಲಕ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿಕೊಂಡಿದ್ದು, ಮನವಿಗೆ ಉಸ್ತುವಾರಿ ಸಚಿವರು ಸ್ಪಂದಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿರುವುದು ಜಿಲ್ಲೆಯ ಜನರಲ್ಲಿ ಆಶಾಬಾವನೆ ಮೂಡಿದೆ ಎಂದು ಹೇಳಿದ್ದಾರೆ.

ಹಲವಾರು ವರ್ಷಗಳಿಂದ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದು, ಸಮಸ್ಯೆ ಬಗೆಹರಿಸಲು ಸಾಧ್ಯವಾಗಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಜಿಲ್ಲೆಯ ಆಗು ಹೋಗುಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಕೊಂಡ ಬಳಿಕ ನಿರಂತರ ಪ್ರವಾಸ, ಸಭೆಗಳನ್ನು ನಡೆಸುವ ಮೂಲಕ ಸಲಹೆ ಸೂಚನೆಗಳೊಂದಿಗೆ ಸಮಸ್ಯೆ ಬಗೆಹರಿಸಲು ಪಣತೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸುವ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ ಸಲಹೆ ಪಡೆದಿರುವುದು ಜಿಲ್ಲೆಯ ಜನರಲ್ಲಿ ಭರವಸೆಯ ಬೆಳಕನ್ನು ಮೂಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಸಂಚರಿಸಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಜನರು ಸಚಿವರು ನಡೆಸುವ ಸಭೆಗಳಲ್ಲಿ ಮತ್ತು ಜನತಾ ದರ್ಶನದಲ್ಲಿ ಭಾಗವಹಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

The District Congress welcomes the bold decision of the District In-charge Minister

About Author

Leave a Reply

Your email address will not be published. Required fields are marked *

You may have missed