September 16, 2024
ವಕೀಲರು ಕೆಂಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ವಕೀಲರು ಕೆಂಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ವಕೀಲರು ಮತ್ತು ಪೊಲೀಸರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮೌನ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿರುವ ಆರು ಮಂದಿ ಪೊಲೀಸರನ್ನ ಬಂಧಿಸುವಂತೆ ಆಗ್ರಹಿಸಿ ವಕೀಲರು ಕೈಗೆ ಕೆಂಪು ಪಟ್ಟಿಯನ್ನ ಕಟ್ಟಿಕೊಂಡು ಕೋರ್ಟಿಗೆ ಹಾಜರಾಗಿದ್ದಾರೆ.

ವಕೀಲ ಪ್ರೀತಮ್ ಗೆ ಜಾಮೀನು ಮಂಜೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಕೀಲರು- ಪೊಲೀಸರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲ್ಲೆಗೊಳಗಾಗಿದ್ದ ವಕೀಲ ಪ್ರೀತಮ್ ಗೆ ಜಾಮೀನು ಮಂಜೂರಾಗಿದೆ. ಜಿಲ್ಲಾ ಮುಖ್ಯ ನ್ಯಾಯಾಧೀಶ ನಂದೀಶ್ ಅವರು ಜಾಮೀನು ಮಂಜೂರು ಮಾಡಿದ್ದು, ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿ ಜಾಮೀನು ನೀಡಿದ್ದಾರೆ.

ವಕೀಲ ಪ್ರೀತಮ್ ಮೇಲೆ ಐಪಿಸಿ ಸೆಕ್ಷನ್ ೩೫೩ರ ಅಡಿ ಪ್ರಕರಣ ದಾಖಲಿಸಲಾಗಿತ್ತು. ೩೫೩ ಸರ್ಕಾರಿ ಅಧಿಕಾರಕ್ಕೆ ಅಡ್ಡಿಪಡಿಸಿದಾಗ ಹಾಕುವ ಸೆಕ್ಷನ್ ಆಗಿದ್ದು, ಇದನ್ನ ಪ್ರೀತಮ್ ಅವರ ಮೇಲೆ ಹಾಕಲಾಗಿತ್ತು. ಹಲ್ಲೆಗೊಳಗಾಗಿದ್ದ ಪ್ರೀತಮ್ ರನ್ನು ಸ್ವಯಂ ಪ್ರೇರಿತರಾಗಿ ನ್ಯಾಯಕ್ಕೆ ಹಾಜರುಪಡಿಸಿದ್ದ ವಕೀಲರು ಜಾಮೀನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Lawyers wearing red bands and silent protest

About Author

Leave a Reply

Your email address will not be published. Required fields are marked *