September 19, 2024

ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಬಿ.ರಾಜಪ್ಪ

0
ಬಿಜೆಪಿ ಹಿರಿಯ ಮುಖಂಡ ಬಿ.ರಾಜಪ್ಪ ಸುದ್ದಿಗೊಷ್ಠಿ

ಬಿಜೆಪಿ ಹಿರಿಯ ಮುಖಂಡ ಬಿ.ರಾಜಪ್ಪ ಸುದ್ದಿಗೊಷ್ಠಿ

ಚಿಕ್ಕಮಗಳೂರು: ಕಳೆದ ೩೫ ವರ್ಷದಿಂದ ಪಕ್ಷದಲ್ಲಿ ನಾನು ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದು ಬಿಜೆಪಿ ಪಕ್ಷ ನನ್ನ ಸೇವೆಯನ್ನು ಪರಿಗಣಿಸಿ ಈ ಬಾರಿಯ ಚಿಕ್ಕಮಗಲೂರು ಉಡುಪಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಬಿ.ರಾಜಪ್ಪ ಆಗ್ರಹಿಸಿದರು.

ಬುಧವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ರಾಜ್ಯ ಜಿಲ್ಲೆ, ಮಂಡಲ ಮಟ್ಟದಲ್ಲಿ ಹಲವು ಜವಾಬ್ದಾರಿಗಳಾದ ನಗರಾಧ್ಯಕ್ಷ, ನಗರ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಕ್ತಾರನಾಗಿ , ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ರಾಮಜನ್ಮಭೂಮಿ, ದತ್ತಪೀಠದಂತ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಪೊಲೀಸರಿಂದ ಏಟು ತಿಂದು ಅನೇಕ ಕೇಸುಗಳನ್ನು ಹಾಕಿಸಿಕೊಂಡು ಸೆರೆಮನೆವಾಸ ಅನುಭವಿಸಿದ್ದೇನೆ ಎಂದು ಹೇಳಿದರು.

ಸಿಡಿಎ ಅಧ್ಯಕ್ಷನಾಗಿ , ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿರ್ದೇಶಕನಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ಅನುಭವ ಹೊಂದಿರುತ್ತೇನೆ. ಈ ಹಿನ್ನೆಲೆಯಲ್ಲಿ ನಾನು ಕೂಡ ಚಿಕ್ಕಮಗಳುರು ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಈ ಕ್ಷೇತ್ರದಲ್ಲಿ ಈಡಿಗ ಮತ್ತು ಬಿಲ್ಲವ ಸಮಾಜ ದೊಡ್ಡ ಶಕ್ತಿಯಾಗಿದೆ. ಈ ಎಲ್ಲ ಅಂಶಗಳನ್ನು ಪಕ್ಷದ ವರಿಷ್ಠರು ಗಮನಿಸಿ ಅಭ್ಯರ್ಥಿಯ ಆಯ್ಕೆ ಸಂದರ್ಭದಲ್ಲಿ ನನ್ನ ಹೆಸರನ್ನು ಪರಿಗಣಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ಡಿ.೧೦ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಮತ್ತು ಬಿಲ್ಲವ ಈಳವ ಸೇರಿ ೨೫ ಉಪಪಂಗಡಗಳ ಜಾಗೃತ ಸಮಾವೇಶವು ಯಶಸ್ವಿಯಾಗಿ ನಡೆದಿದೆ. ಸಮಾಜದ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು ವಿಧಾನಸಭೆ ಅವೇಶನ ಮುಗಿದ ನಂತರ ಬೇಡಿಕೆ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದರು.

ಬ್ರಹ್ಮಶ್ರೀ ನಾರಾಯಣ ಗುರು ಸಮಿತಿಯ ಅಧ್ಯಕ್ಷ ಎಂ.ಕೃಷ್ಣಪ್ಪ, ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್, ಮುಖಂಡರಾದ ಜಗದೀಶ್, ಕೇಶವ, ವಿಜಯ್‌ಕುಮಾರ್ ಮತ್ತಿತರರಿದ್ದರು.

B. Rajappa should give me ticket from Chikkamagaluru Udupi Lok Sabha constituency

About Author

Leave a Reply

Your email address will not be published. Required fields are marked *

You may have missed