ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲು ಮನವಿ
ಚಿಕ್ಕಮಗಳೂರು: : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಬಿಜೆಪಿ ವರಿ?ರಿಗೆ ೨ನೇ ಬಾರಿಗೆ ಮನವಿ ಸಲ್ಲಿಸಿರುವುದಾಗಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ನಾಗೇಶ್ ಅಂಗೀರಸ ಅವರು ತಿಳಿಸಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿ ಕಳೆದ ಆರು ತಿಂಗಳ ಹಿಂದೆಯೇ ಬಿಜೆಪಿ ಪಕ್ಷದ ಹೈಕಮಾಂಡ್ ಮತ್ತು ಸಂಘ ಪರಿವಾರದ ಹಿರಿಯ ಮುಖಂಡರಿಗೆ ಮನವಿ ಸಲ್ಲಿಸಲಾಗಿತ್ತು. ಈಗ ಎರಡನೇ ಹಂತವಾಗಿ ಸಂಪೂರ್ಣ ವಿವರದೊಂದಿಗೆ ಹೈಕಮಾಂಡ್ ಮತ್ತು ರಾಜ್ಯ ಘಟಕಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಇದುವರೆಗೆ ಹಲವಾರು ಜನಪರವಾದ ಕಾರ್ಯಗಳನ್ನು ಕೈಗೊಂಡಿದ್ದು ಈ ನಿಟ್ಟಿನಲ್ಲಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದು, ತಾವು ನಿರಂತರವಾಗಿ ಈ ಪ್ರಯತ್ನ ನಡೆಸಿದ್ದು ತಮಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
Nagesh Angirasa