September 19, 2024

ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

0
ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿ?ಪನೆ ಹಾಗೂ ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ಸೋಮವಾರ ಸರ್ಕಾರದ ಆದೇಶದಂತೆ ವಿಶೇಷ ಪೂಜೆ ನಡೆಸಲಾಯಿತು.

ಕನ್ನಡಪೂಜಾರಿ ಹಿರೇಮಗಳೂರು ಕಣ್ಣನ್ ನೇತೃತ್ವದಲ್ಲಿ ಸಲ್ಲಿಸಲಾಯಿತು. ಶಾಸಕ ಹೆಚ್.ಡಿ.ತಮ್ಮಯ್ಯ ದೇವಾಲಯಕ್ಕೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡರು. ದೇವಾಲಯವನ್ನು ಹೂವು, ತಳಿರು,ತೋರಣಗಳಿಂದ ಸಿಂಗರಿಸಲಾಯಿತ್ತು.

ನಂತರ ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿ?ಪನೆಯಾಗಿರುವುದು ಇಡೀ ದೇಶದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಮಹತ್ವದ ದಿನ ಹೇಳಿದರು.

ದೇಶದಲ್ಲಿ ದೇವನೊಬ್ಬ ನಾಮ ಹಲವು ಎಂಬಂತಿದ್ದರೂ ಮರ್ಯಾದ ಪುರು? ಶ್ರೀರಾಮನಿಗೆ ವಿಶೇ?ವಾದ ಭಕ್ತಿಯನ್ನು ಜನತೆ ಅರ್ಪಿಸುತ್ತಿದ್ದಾರೆ. ಹಿರೇಮಗಳೂರಿನ ಈ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸತತ ಹದಿನಾಲ್ಕು ವ?ಗಳಿಂದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ ಎಂದರು.
ದತ್ತಪೀಠದಲ್ಲಿ ಹೊಸ ಹೊಸ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು ಈಗಾಗಲೇ ಈ ಕುರಿತು, ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಏನು ಹೇಳುವುದಿಲ್ಲ. ಜಿಲ್ಲಾಡಳಿತ ಮತ್ತು ಸರ್ಕಾರ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಹಿಂದಿನಂತೆ ಪ್ರತಿ ವ?ವೂ ದತ್ತ ಜಯಂತಿಯ ಸಂದರ್ಭದಲ್ಲಿ ಯಥಾಸ್ಥಿತಿ ಆಚರಣೆಗಳು ನಡೆದುಕೊಂಡು ಬರುತ್ತಿದೆ ಎಂದು ತಿಳಿಸಿದರು.

Special Puja at Shree Kodandarameshwar Temple-Hiremagaluru

 

 

About Author

Leave a Reply

Your email address will not be published. Required fields are marked *

You may have missed