September 8, 2024

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0
ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ನಗರದ ಘಟಕ ಪ್ರತಿಭಟ

ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ನಗರದ ಘಟಕ ಪ್ರತಿಭಟ

ಚಿಕ್ಕಮಗಳೂರು: : ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾ ಬಿಜೆಪಿ ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇಂದು ಬೆಳಗ್ಗೆ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಸರ್ಕಾರದ ವಿರುದ್ಧ ಹಾಗು ಘಟನೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರ ಶ್ರೀರಾಮ ವಿರೋಧಿ ಮತ್ತು ಹಿಂದೂ ವಿರೋಧಿ ಆಡಳಿತ ನಡೆಸುತ್ತಿದೆ ಇದನ್ನು ಖಂಡಿಸಿದ ಅವರು ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ಸ್ಥಳೀಯ ಗ್ರಾ.ಪಂ ನಿಂದ ಸರ್ವಾನುಮತದ ನಿರ್ಣಯದೊಂದಿಗೆ ಸ್ವಂತ ಖರ್ಚಿನಲ್ಲಿ ಈ ಭಗವಧ್ವಜವನ್ನು ಹಾಕಲಾಗಿತ್ತು. ಇದಕ್ಕೆ ಸಹಕಾರ ಸಚಿವ ಹಾಗೂ ಶಾಸಕರ ಚಿತಾವಣೆಯಿಂದ ಧ್ವಜವನ್ನು ಕೆಳಗಿಳಿಸಿರುವ ಕ್ರಮವನ್ನು ಖಂಡಿಸಿದರು.

ಇದಲ್ಲದೆ ರಾಷ್ಟ್ರಧ್ವಜವನ್ನು ಮಧ್ಯಾಹ್ನ ೩ ಗಂಟೆಗೆ ಹಾರಿಸುವ ಮೂಲಕ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಸಂಬಂಧಿಸಿದ ನಿಯಮಾವಳಿಗಳನ್ನು ಉಲ್ಲಂಘಿಸುವ ಮೂಲಕ ಅಪಮಾನ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಕೂಡಲೇ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಹಾರಿಸುವಂತೆ ಒತ್ತಾಯಿಸುತ್ತ ಹಿಂದೂ ಸಮಾಜವನ್ನು ಗೌರವಿಸುವ ರೀತಿ ರಾಜ್ಯ ಸರ್ಕಾರ ಆಡಳಿತ ನಡೆಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಅಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ, ಸಿ.ಹೆಚ್ ಲೋಕೇಶ್, ದಿನೇಶ್, ಪುಷ್ಪರಾಜ್, ಹೆಚ್.ಎಸ್ ಪುಟ್ಟಸ್ವಾಮಿ, ರಂಗನಾಥ್, ಬಿ.ರಾಜಪ್ಪ, ಜೆಸಂತ, ಮಧುಕುಮಾರ್ ರಾಜ್ ಅರಸ್, ರೂಪಕುಮಾರ್ ಮತ್ತಿತರರು ಭಾಗವಹಿಸಿದ್ದರು.

District BJP city unit protest against Govt

About Author

Leave a Reply

Your email address will not be published. Required fields are marked *

You may have missed