ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಹೆಚ್ಎಂ ನಾರಾಯಣ್ ಅವಿರೋಧವಾಗಿ ಆಯ್ಕೆ
ಚಿಕ್ಕಮಗಳೂರು: ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹೆಚ್ಎಂ ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಗೌರವಾಧ್ಯಕ್ಷರಾಗಿ ಹೆಚ್ಎಲ್ ಶೇಖರಪ್ಪ ಉಪಾಧ್ಯಕ್ಷರಾಗಿ ಟಿ ಎನ್ ವಿಶುಕುಮಾರ್ ಆಯ್ಕೆಯಾಗಿದ್ದಾರೆ
ನಗರದ ನೇಕಾರ ಬೀದಿಯ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಭಾನುವಾರ ಒಕ್ಕೂಟದ ರಾಜ್ಯಾಧ್ಯಕ್ಷ ಬಿಎಸ್ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು
ಆಯ್ಕೆಯ ನಂತರ ನಡೆದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಹೆಚ್ಎಲ್ ಶೇಖರಪ್ಪ ನೂತನ ಅಧ್ಯಕ್ಷ ಎಚ್ ಎಮ್ ನಾರಾಯಣ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಎಚ್ ಎಮ್ ನಾರಾಯಣ್ ನೇಕಾರ ಸಮುದಾಯಗಳ ಅಭಿವೃದ್ಧಿ ಮಾಡುವುದು ತಮ್ಮ ಗುರಿಯಾಗಿದ್ದು ಆ ಕಾರ್ಯಕ್ಕೆ ಎಲ್ಲರೂ ತಮ್ಮೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಮುದಾಯದ ಜನರ ಪ್ರತಿ ಮನೆಗೆ ತೆರಳಿ ಅವರ ಮನವೊಲಿಸಿ ಒಕ್ಕೂಟದ ಸದಸ್ಯರನ್ನಾಗಿ ಮಾಡಲಾಗುವುದು ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ನೇಕಾರರ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು
ರಾಜ್ಯಾಧ್ಯಕ್ಷ ಬಿಎಸ್ ಸೋಮಶೇಖರ್ ಮಾತನಾಡಿ ಜಿಲ್ಲೆಯಲ್ಲಿ ನೇಕಾರ ಸಮುದಾಯಗಳ ಜನರನ್ನು ಒಗ್ಗೂಡಿಸುವ ಮೂಲಕ ಸಂಘಟನೆಯ ಬಲವನ್ನು ಹೆಚ್ಚಿಸುವಂತೆ ಸೂಚಿಸಿದರು.
ಇದೇ ವೇಳೆ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು ನೂತನ ಅಧ್ಯಕ್ಷ ಹೆಚ್ಎಂ ನಾರಾಯಣ್ ಅವರನ್ನು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅಭಿನಂದಿಸಿದರು.
ಒಕ್ಕೂಟದ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವಪ್ಪ ಶೆಟ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ ಟಿ ಶಿವರಾಂ ಕಾರ್ಯದರ್ಶಿ ಬಿ ಎಂ ಕುಮಾರ್ ಹೆಚ್ ಸಿ ಮಂಜುನಾಥ್ ಸಿಂಗಟಗೆರೆ ಸಿದ್ದಪ್ಪ ಶಿಕ್ಷಕ ಶಿವಣ್ಣ ಒಕ್ಕೂಟದ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ಪುಷ್ಪಾ ರಾಜೇಂದ್ರ ಬನಶಂಕರಿ ಮಹಿಳಾ ಸಮಾಜದ ಅಧ್ಯಕ್ಷೆ ಸುವರ್ಣ ಕೇಶವಮೂರ್ತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
HM Narayan was elected unopposed as the District President of the Federation of Weaver Communities