September 22, 2024
ಬಿಜೆಪಿ ಗ್ರಾಮ ಮಂಡಲ ಎಸ್.ಸಿ.ಮೋರ್ಚಾ ಅಧ್ಯಕ್ಷ ಹಂಪಯ್ಯ ಪತ್ರಿಕಾಗೋಷ್ಠಿ

ಬಿಜೆಪಿ ಗ್ರಾಮ ಮಂಡಲ ಎಸ್.ಸಿ.ಮೋರ್ಚಾ ಅಧ್ಯಕ್ಷ ಹಂಪಯ್ಯ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ದಲಿತ ಸಮಾಜವನ್ನು ಒಗ್ಗೂಡಿಸುವ ದೃಷ್ಠಿಯಿಂದ ಪೆ.೭ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಭೀಮಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಗ್ರಾಮ ಮಂಡಲ ಎಸ್.ಸಿ.ಮೋರ್ಚಾ ಅಧ್ಯಕ್ಷ ಹಂಪಯ್ಯ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಂದು ಬೆಳಗ್ಗೆ ೧೦ ಗಂಟೆಗೆ ಈ ಸಮಾವೇಶವನ್ನು ಏರ್ಪಡಿಸಲಾಗಿದ್ದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಸೇರಿದಂತೆ ಹಲವಾರು ಗಣ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್‌ರವರಿಗೆ ಮಾಡಿದ ಅಪಮಾನ ಹಾಗೂ ನಂತರ ಡಾ|| ಬಿ.ಆರ್ ಅಂಬೇಡ್ಕರ್ ನಡೆದು ಬಂದ ಹಾದಿಯ ಬಗ್ಗೆ ಸಮಾವೇಶನದಲ್ಲಿ ಚಿಂತನ-ಮಂಥನ ನಡೆಸಲಾಗುವುದು ಎಂದು ತಿಳಿಸಿದರು.

ಸ್ವಾತಂತ್ರ್ಯ ನಂತರದಲ್ಲಿ ಆಡಳಿತಕ್ಕೆ ಬಂದ ಸರ್ಕಾರಗಳು ಡಾ|| ಬಿ.ಆರ್ ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಏಳಿಗೆಗೆ ಸಂಬಂಧ ಪಟ್ಟಂತೆ ನಡೆದುಕೊಂಡ ರೀತಿನೀತಿಗಳು ಹಾಗೂ ದಲಿತ ಉದ್ದಾರಕ್ಕೆ ಕೈಗೊಂಡಿರುವ ಯೋಜನೆಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು. ಈ ಸಮಾವೇಶದಲ್ಲಿ ದಲಿತ ಸಮಾಜದ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರುಗಳಾದ ಜೆ.ಡಿ ಲೋಕೇಶ್, ರೇವನಾಥ್, ಕೇಶವಮೂರ್ತಿ, ಯತೀಶ್, ಗುರುಸ್ವಾಮಿ ಮತ್ತಿತರರಿದ್ದರು.

Bhima convention to unite Dalit society on February 7

About Author

Leave a Reply

Your email address will not be published. Required fields are marked *

You may have missed