September 8, 2024

ಕಾಂಗ್ರೆಸ್ ಪಕ್ಷದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

0
ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ರಿಂದ ಕಾಂಗ್ರೆಸ್ ಪಕ್ಷದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ರಿಂದ ಕಾಂಗ್ರೆಸ್ ಪಕ್ಷದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು:  ನಗರದ ಕುವೆಂಪು ಕಲಾಮಂದಿರ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮೂರು ಅಂತಸ್ತಿನ ಕಾಂಗ್ರೆಸ್ ಪಕ್ಷದ ನೂತನ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ರವರು ಶನಿವಾರ ಪೂಜೆ ನೆರವೇರಿಸುವ ಮುಖಾಂತರ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಈ ಕುರಿತು ಮಾತನಾಡಿದ ಕಟ್ಟಡ ಸಮಿತಿ ಅಧ್ಯಕ್ಷ ಡಾ|| ಡಿ.ಎಲ್.ವಿಜಯ್‌ಕುಮಾರ್ ನೂತನ ಭವನವು ಅಂದಾಜು ನಾಲ್ಕು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ತ್ವರಿತವಾಗಿ ಕಟ್ಟಡ ಪೂರ್ಣಗೊಳಿಸಲು ತೀರ್ಮಾನ ಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಪಕ್ಷದ ನೂತನ ಭವನಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದು ಇದೀಗ ಸಚಿವರ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪಕ್ಷದಲ್ಲೂ ಹಲವು ಮುಖಂಡರ ನೇತೃತ್ವದಲ್ಲಿ ಕಟ್ಟಡ ಸಮಿತಿ ಸ್ಥಾಪಿಸಿ ಭವನ ನಿರ್ಮಾಣದಲ್ಲಿ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಕಟ್ಟಡ ಸಮಿತಿಯ ಖಜಾಂಚಿ ಕೆ.ಎಸ್.ಶಾಂತೇಗೌಡ, ಸಂಚಾಲಕ ಎಂ.ಸಿ.ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಪಕ್ಷದ ಮುಖಂಡರುಗಳಾದ ಗಾಯತ್ರಿ ಶಾಂತೇಗೌಡ, ಕೆ.ಮಹಮ್ಮದ್, ನಯಾಜ್, ಕೆ.ವಿ. ಮಂಜುನಾಥ್, ಅನ್ಸರ್ ಆಲಿ ಮತ್ತಿತರರು ಹಾಜರಿದ್ದರು.

District In-charge Minister K.J. George laid the foundation stone for the new building of the Congress party

About Author

Leave a Reply

Your email address will not be published. Required fields are marked *

You may have missed