ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡಲು ಮನವಿ
ಚಿಕ್ಕಮಗಳೂರು: ಆಟೋಗಳಿಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಸಲು ಸಮಯಾವಕಾಶ ಕಲ್ಪಿಸಿಕೊಡಬೇಕು ಎಂದು ಕನ್ನಡಸೇನೆ ಮುಖಂಡರುಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ಸಂಬಂಧ ಶಿರಸ್ತೇದಾರ್ ಹೇಮಂತ್ಕುಮಾರ್ ಅವರಿಗೆ ಕನ್ನಡಸೇನೆ ಮುಖಂಡರುಗಳು ಮನವಿ ಸಲ್ಲಿಸಿ ತೀವ್ರ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ನಂಬರ್ ಅಳವಡಿಸಲು ಕಾಲಾವಕಾಶ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಬಳಿಕ ಮಾತನಾಡಿದ ಸೇನೆಯ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್ ನಗರದಲ್ಲಿ ಈಗಾಗಲೇ ನಗರ ಸಾರಿಗೆ ಬಸ್ಗಳ ಸಂಖ್ಯೆ ಹೆಚ್ಚಳವಾಗಿವೆ ಹಾಗೂ ರ್ಯಾಪಿಡ್ ಬೈಕ್ಗಳ ಹಾವಳಿ ಇರುವುದರಿಂದ ಆಟೋ ಚಾಲಕ ರು ಮತ್ತು ಮಾಲೀಕರು ದಿನನಿತ್ಯ ಬಾಡಿಗೆಯು ದೊರೆಯದೇ ತೀವ್ರ ಸಂಕಷ್ಟ ಎದುರಾಗಿದೆ ಎಂದರು.
ಸಾವಿರಾರು ಸಂಖ್ಯೆಯಲ್ಲಿ ಆಟೋಗಳು ನಗರದಲ್ಲಿ ಸಂಚರಿಸುತ್ತಿವೆ. ಉಚಿತ ಬಸ್ ವ್ಯವಸ್ಥೆ ಹಾಗೂ ಇನ್ನಿತರೆ ಬಾಡಿಗೆ ವಾಹನಗಳಿಂದ ಆಟೋ ಚಾಲಕರು ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ಇದೀಗ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ನ್ನು ಬದಲಾವಣೆ ಮಾಡುವಂತೆ ಆದೇಶಿಸಿರುವುದು ನುಂಗಲಾರದ ತುತ್ತಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಆಟೋ ಚಾಲಕರು ಮತ್ತು ಮಾಲೀಕರ ಮೇಲೆ ದಯಮಾಡಿ ನಂಬರ್ಪ್ಲೇಸ್ ಬದ ಲಾವಣೆ ಕನಿಷ್ಟ ಐದಾರು ತಿಂಗಳ ಕಾಲ ಸಮಯಾವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಕಾಲಾವಕಾಶ ನೀಡುವ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡಸೇನೆ ಮುಖಂಡರಾದ ಸತೀಶ್, ವಿನಯ್, ಪಾಲಾಕ್ಷಿ, ಶಾಹೀದ್, ಅನ್ವರ್ ಮತ್ತಿತರರಿದ್ದರು.
Request to give time for installation of number plate