September 19, 2024

ಪಕ್ಷದ್ರೋಹ ಮಾಡಿದ್ರೆ ಅವರ ಕರ್ಮ ಅವರ ಬೆನ್ನು ಹಿಡಿದು ಕಾಡುತ್ತದೆ

0
ಮಾಜಿ ಸಚಿವ ಸಿ.ಟಿ. ರವಿ

ಮಾಜಿ ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಪಕ್ಷ ದ್ರೋಹ ಮಾಡಿದ್ರೆ ಅವರವರ ಕರ್ಮ ಅವರ ಬೆನ್ನು ಹಿಡಿದು ಕಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟಿದ್ದಾರೆ.

ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ಸೇರಿ ಸಿ.ಟಿ. ರವಿ ಅವರನ್ನು ಶೋಭಾ ಕರಂದ್ಲಾಜೆ ಸೋಲಿಸಿದರೆಂಬ ಸಾರ್ವಜನಿಕ ಚರ್ಚೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಇದನ್ನು ನಾನು ಸಾರ್ವಜನಿಕ ಚರ್ಚೆಯ ವಿಷಯವಾಗಿ ಮಾಡಲು ಬಯಸುವುದಿಲ್ಲ, ನನ್ನ ಗ್ರಹಚಾರ ಸರಿ ಇರಲಿಲ್ಲ, ನನ್ನದೇ ತಪ್ಪಿರಬಹುದೆಂದು ಈಗಾಗಲೇ ಹೇಳಿದ್ದೇನೆ ಎಂದು ಹೇಳಿ, ಮೆಡಿಕಲ್ ಕಾಲೇಜು ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ನಿರ್ಮಾಣ, ಕುಡಿಯುವ ನೀರು ಕೆರೆ ತುಂಬಿಸುವ ಯೋಜನೆಗಳಿಗೆ, ವಿವಿಧ ಸಮುದಾಯಗಳಿಗೆ ಸಮುದಾಯ ಭವನಗಳು, ರೈತರಿಗೆ ನಿವೇಶನ, ಕೊಳಚೆ ಪ್ರದೇಶ ನಿವಾಸಿಗರಿಗೆ ಮನೆ ನಿರ್ಮಾಣ, ಇವೆಲ್ಲ ಮಾಡಿದ್ದರಿಂದ ಜನ ನಮ್ಮನ್ನು ಕೈ ಬಿಡುವುದಿಲ್ಲ ಎಂಬ ಅತಿಯಾದ ವಿಶ್ವಾಸ ಇತ್ತು ಎಂದರು.

ವಿಶ್ವಾಸವು ಕೂಡ ಹೀಗೊಮ್ಮೆ ಸೋಲಿಗೆ ಕಾರಣ ಆಗುತ್ತದೆ ಎಂದು ಕೊಂಡಿರಲಿಲ್ಲ ಎಂದು ಹೇಳಿ, ನಾನು ಇನ್ನೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಹೋಗುವುದಿಲ್ಲ, ಅವರ ಕರ್ಮವನ್ನು ಅವರೇ ಅನುಭವಿಸಬೇಕು. ನನ್ನ ತಪ್ಪಿನಿಂದ ಸೋತಿದ್ದೇನೆಂದು ಈಗಾಗಲೇ ಹೇಳಿಕೊಂಡಿದ್ದೇನೆ. ಯಾರಾದರೂ ಪಕ್ಷದ್ರೋಹ ಕೆಲಸ ಮಾಡಿದ್ದರೆ ಅವರ ಕರ್ಮ ಅವರ ಬೆನ್ನು ಹಿಡಿದು ಕಾಡುತ್ತದೆ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ ಎಂದರು.

If he betrays his side his karma will haunt him

 

About Author

Leave a Reply

Your email address will not be published. Required fields are marked *

You may have missed