September 16, 2024

ಕರ್ನಾಟಕ ರಾಜ್ಯ ರೈತ ಸಂಘಕ್ಕೆ ಪದಾಧಿಕಾರಿಗಳ ನೇಮಕ

0
ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸುದ್ದಿಗೋಷ್ಠಿ

ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸಮಿತಿ ಸದಸ್ಯರನ್ನಾಗಿ ಎಂ.ಸಿ.ಬಸವರಾಜು, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಬಿ.ಚಂದ್ರಶೇಖರ್, ನಿಡಘಟ್ಟ ದಯಾನಂದ, ಟಿ.ಎ.ಮಂಜುನಾಥ್ ಅವರನ್ನು ನೇಮಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಶಿವಾನಂದ (ಪಾಪಣ್ಣ), ಜಿಲ್ಲಾ ಖಜಾಂಚಿಯಾಗಿ ಪರ್ವತೇಗೌಡ, ಜಿಲ್ಲಾ ಕಾರ್ಯದರ್ಶಿ ಎಂ.ಆರ್.ಪರಮೇಶ್ ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ದರ್ಶನ್ ಅವರನ್ನು ನೇಮಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಮಹೇಶ್ ಮಾತನಾಡಿ, ಚಿಕ್ಕಮಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಸುನಿಲ್‌ಕುಮಾರ್, ಗೌರವ ಅಧ್ಯಕ್ಷ ರಾಗಿ ಎಚ್.ಎಸ್.ಲೋಕೇಶ್, ಮರ್ಲೆಮಲ್ಲಪ್ಪ, ಕಾರ್ಯಾಧ್ಯಕ್ಷ ಮರ್ಲೆ ಶಂಕರ್, ಉಪಾಧ್ಯಕ್ಷರಾಗಿ ಕೆಸವಿನಮನೆ ಆನಂದ್, ಬಿಕ್ಕೇಮನೆ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಹಿರೇಗೌಜ ಉಮೇಶ್, ಖಜಾಂಚಿ ಜೆ.ಎಸ್.ಶಿವಣ್ಣ ಇವರನ್ನು ನೇಮಕ ಮಾಡಿ ಸಂಘಟನೆ ಬಲಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಚಂದ್ರಶೇಖರ್, ಶಿವಣ್ಣ, ದರ್ಶನ್ ಸುದ್ದಿಗೋಷ್ಠಿಯಲ್ಲಿದ್ದರು.

Appointment of office bearers for Karnataka State Farmers Association

About Author

Leave a Reply

Your email address will not be published. Required fields are marked *