September 19, 2024

ಬಿಜೆಪಿ ತಿರಸ್ಕರಿಸಿ ಬದುಕಿನ ರಾಜಕಾರಣಕ್ಕೆ ಕಾಂಗ್ರೆಸ್ ಬೆಂಬಲಿಸಿ

0
ರಾಜ್ಯ ಪರಿಶಿಷ್ಟ ವಿಭಾಗ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಸ್ ಸುಬ್ರಮಣ್ಯ ಸುದ್ದಿಗೋಷ್ಠಿ

ರಾಜ್ಯ ಪರಿಶಿಷ್ಟ ವಿಭಾಗ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಸ್ ಸುಬ್ರಮಣ್ಯ ಸುದ್ದಿಗೋಷ್ಠಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಹಿಂದುತ್ವ ಮತ್ತು ಧಾರ್ಮಿಕ ಭಾವನೆಗಳ ಮೂಲಕ ಜನರ ಗಮನ ಬೇರೆಡೆ ಸೆಳೆದು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಸೋಲಿಸಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸುವಂತೆ ರಾಜ್ಯ ಪರಿಶಿಷ್ಟ ವಿಭಾಗ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಸ್ ಸುಬ್ರಮಣ್ಯ ಮತದಾರರಲ್ಲಿ ಮನವಿ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿ ತಮ್ಮನ್ನು ಪರಿಶಿ? ವಿಭಾಗಕ್ಕೆ ನೇಮಕ ಮಾಡಿರುವ ಪಕ್ಷದ ರಾಜ್ಯಾಧ್ಯಕ್ಷ ಧರ್ಮಸೇನಾ ಜಿಲ್ಲಾಧ್ಯಕ್ಷ ಕೆ.ಪಿ ಅಂಶುಮಂತ್ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಶಾಸಕರು ಸೇರಿ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ರಾಜ್ಯ ಸರ್ಕಾರದ ೫ ಗ್ಯಾರಂಟಿ ಯೋಜನೆಗಳು ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆಯವರಿಗೆ ಶ್ರೀರಕ್ಷೆ ಆಗಿ ಸುಮಾರು ೧.೫೦ ಲಕ್ಷ ಮತಗಳ ಅಂತರದಲ್ಲಿ ವಿಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನ ಬದಲಿಸುತ್ತೇವೆ ಎನ್ನುವ ಬಿಜೆಪಿಯನ್ನು ತಿರಸ್ಕರಿಸಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸಂವಿಧಾನ ರಕ್ಷಣೆಗಾಗಿ ಬಿಜೆಪಿಯ ಕುತಂತ್ರಗಳನ್ನು ರಾಜ್ಯದ ಜನರಿಗೆ ಮನವರಿಕೆ ಮಾಡುವ ಜೊತೆಗೆ ಮತ ಪರಿವರ್ತನೆಗೆ ಶ್ರಮಿಸಲಾಗಿದ್ದು ಜನರ ನಾಡಿ ಮಿಡಿತವಾಗಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ವಿನಂತಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು, ಸ್ವಹಿತಾಸಕ್ತಿ, ಪ್ರತಿ?ಯನ್ನು ಬದಿಗಿರಿಸಿ ಸಮರ್ಥ ಜನಪರವಾದ ನಾಯಕ ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು. ರಾಜ್ಯದ ೨೮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿ? ವಿಭಾಗದ ಅಧ್ಯಕ್ಷ ಮಲ್ಲೇಶ್, ಮುಖಂಡರುಗಳಾದ ಹಾಲಪ್ಪ, ರಘು, ಮೋಹನ್ ಕುಮಾರ್, ಈಶ್ವರ್, ಧರ್ಮೇಶ ಇದ್ದರು.

Reject BJP and support Congress for the politics of life

About Author

Leave a Reply

Your email address will not be published. Required fields are marked *

You may have missed