September 16, 2024
ಸಖರಾಯಪಟ್ಟಣದಲ್ಲಿ ನಡೆಯುತ್ತಿರುವ ಸಂತೆಯಲ್ಲಿ ಬಿಜೆಪಿ ಮತ ಪ್ರಚಾರ

ಸಖರಾಯಪಟ್ಟಣದಲ್ಲಿ ನಡೆಯುತ್ತಿರುವ ಸಂತೆಯಲ್ಲಿ ಬಿಜೆಪಿ ಮತ ಪ್ರಚಾರ

ಚಿಕ್ಕಮಗಳೂರು: ಕೋವಿಡ್ ಚುಚ್ಚುಮದ್ದು ನೀಡಿ ಜನರ ರಕ್ಷಣೆ ಹಾಗೂ ಭದ್ರತೆಯಲ್ಲಿ ಭಾರತವನ್ನು ಉನ್ನತ ಶ್ರೇಣಿಯಲ್ಲಿರಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ಮತ ನೀಡುವಂತೆ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆ.ಸಿ ಕಲ್ಮರುಡಪ್ಪ ಮನವಿ ಮಾಡಿದರು.

ಅವರು ಇಂದು ಸಖರಾಯಪಟ್ಟಣದಲ್ಲಿ ನಡೆಯುತ್ತಿರುವ ಸಂತೆಯಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿದರು.೫ ಗ್ಯಾರಂಟಿ ಯೋಜನೆಗಳನ್ನು ಹೊರತುಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏನೂ ಹೇಳುತ್ತಿಲ್ಲ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಬರಗಾಲ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಜನಪರವಾದ ದೇಶದ ಭವಿ?, ಮಕ್ಕಳ ಭವಿ?ದ ದೃಷ್ಟಿಯಿಂದ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಸದಿಚ್ಚೆಯನ್ನು ಮತದಾರರು ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ೨ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಡವರ ಬದುಕಿಗೆ ಶಕ್ತಿ ತುಂಬಿದ್ದರಿಂದ ಅಚ್ಚೇದಿನ್ ಬಂದಿದೆ. ಉಜ್ವಲ ಯೋಜನೆಯಡಿ ಗ್ಯಾಸ್ ಉಚಿತ ನೀಡಿರುವುದು, ಜನಧನ್ ಖಾತೆ ತೆರೆದಿರುವುದು, ಕೃಷಿ ಸಮ್ಮಾನ್, ಇರಾಕ್, ಇರಾನ್ ಯುದ್ಧ ಸಂದರ್ಭದಲ್ಲಿ ಭಾರತೀಯ ರಕ್ಷಣೆ ಮಾಡಿದ್ದು ಅಚ್ಚೇದಿನ್ ಅಲ್ಲವೇ ಎಂದು ಹೇಳಿದರು.

ಪ್ರತಿ ಹಳ್ಳಿಗಳ ಸಂಪರ್ಕ ಕಲ್ಪಿಸುವ ಕಾಂಕ್ರಿಟ್ ರಸ್ತೆ ನಿರ್ಮಾಣ ಜೊತೆಗೆ ದಲಿತ ಕಾಲೋನಿಗಳಿಗೂ ಉತ್ತಮವಾದ ರಸ್ತೆಗಳನ್ನು ನಿರ್ಮಿಸಿರುವುದು ಕೇಂದ್ರ ಸರ್ಕಾರದ ಜನಪರ ಯೋಜನೆಗಳಲ್ಲಿ ಒಂದು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶ್ ಒಡೆಯರ್, ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ನಂದೀಶ್ ಮದಕರಿ, ಲೋಕೇಶ್ ಮಾಸ್ಟರ್, ರಾಜ್ಯ ಮಡಿವಾಳ ಸಂಘದ ಉಪಾಧ್ಯಕ್ಷ ಶಿವಮೂರ್ತಿ, ಪ್ರದೀಪ್‌ನಾಯ್ಕ್, ನಾಗೇಗೌಡ, ಮೋಹನ್ ಕುಮಾರ್, ಜಯಪ್ಪ ಇದ್ದರು.

Support BJP for a secure India

About Author

Leave a Reply

Your email address will not be published. Required fields are marked *