September 16, 2024

ಅಲ್ಲಂಪುರ ಗ್ರಾ.ಪಂ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧ ಆಯ್ಕೆ

0
ಅಲ್ಲಂಪುರ ಗ್ರಾ.ಪಂ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧ ಆಯ್ಕೆ

ಅಲ್ಲಂಪುರ ಗ್ರಾ.ಪಂ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧ ಆಯ್ಕೆ

ಚಿಕ್ಕಮಗಳೂರು: ಅಲ್ಲಂಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರವೀಶ್ ಘೋಷಣೆ ಮಾಡಿದರು.

ಬಿಜೆಪಿ ಮುಖಂಡ ಟಿ.ರಾಜಶೇಖರ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಅಲ್ಲಂಪುರ ಗ್ರಾಮಪಂಚಾಯಿತಿಯ ಸದಸ್ಯರು ಹಾಗೂ ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಹೆಚ್ಚಿನ ಅನುದಾನ ತಂದು ಸರ್ಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಪಂಚಾಯಿತಿಯನ್ನಾಗಿಸುವಲ್ಲಿ ಶ್ರಮಿಸಲಿ ಎಂದು ಸಲಹೆ ನೀಡಿದರು.

ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್ ಮಾತನಾಡಿ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಎಲ್ಲರ ಸಹಕಾರದೊಂದಿಗೆ ಕಾರ್ಯಗತ ಮಾಡಬೇಕು, ಮುಖ್ಯವಾಗಿ ಗ್ರಾಮಗಳಲ್ಲಿನ ಕುಡಿಯುವ ನೀರು, ಬೀದಿ ದೀಪ ಸಮಸ್ಯೆ, ಸ್ವಚ್ಚತೆಗೆ ಆಧ್ಯತೆ ನೀಡಿ ಎಲ್ಲಾ ಸದಸ್ಯರು ಅಪಾರ ನಂಬಿಕೆ, ವಿಶ್ವಾಸದೊಂದಿಗೆ ಅಲ್ಲಂಪುರ ಪಂಚಾಯಿತಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಜವಾಬ್ದಾರಿ ಹೆಚ್ಚಿಸಿದೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಗ್ರಾ.ಪಂ ನೂತನ ಅಧ್ಯಕ್ಷೆ ಅರ್ಪಿತ.ಎ.ಎಂ.ಪ್ರಸನ್ನ ಮಾತನಾಡಿ ನೂತನ ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಧನ್ಯವಾದಗಳು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ರಾಜೀವ್, ಕುರುವಂಗಿ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಕನಕರಾಜ್ ಅರಸ್, ಮಾಜಿ ಜಿಪಂ ಸದಸ್ಯ ಜೆ.ಡಿ.ಲೋಕೇಶ್, ಗ್ರಾಮಪಂಚಾಯಿತಿ ಉಪಾಧ್ಯಕ್ಷ ಕೃಷ್ಣ, ಸದಸ್ಯರುಗಳಾದ ಪೂರ್ಣಿಮಾ, ವಸಣತ್ ಕುಮಾರ್, ರಮೇಶ್, ದಾನೇಶ್, ಶಿವರಾಜು, ಜಯಂತಿ, ಪದ್ಮಾಕ್ಷಿ, ಕಮ, ಶಿಲ್ಪ, ಮಧುಸೂದನ್ ರಾವ್, ಮಾಜಿ ಅಧ್ಯಕ್ಷೆ ಗೌರಮ್ಮ, ದಾಸರಹಳ್ಳಿ ಗ್ರಾಪಂ ಅಧ್ಯಕ್ಷ ಸತೀಶ್‌ಪಾಪಣ್ಣ, ಪಿಡಿಓ ಮಂಜುನಾಥ್, ಕಾರ್ಯದರ್ಶಿ ರಾಜಶೇಖರ್, ಮತ್ತು ಗ್ರಾಮಸ್ಥರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

Apita.AM Prasan was elected unopposed as the President of Allampura Gram Panchayat

About Author

Leave a Reply

Your email address will not be published. Required fields are marked *