September 19, 2024

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ

0
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ

ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ಅಭ್ಯರ್ಥಿ ಅಲ್ಪ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಜೆಪಿ ಕಚೇರಿ ಎದರು ಜಮಾಯಿಸಲಾರಂಭಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರವಾಗಿ ಹಾಗೂ ಪಕ್ಷದ ನಾಯಕರ ಪರವಾಗಿ ಜಯಘೋಷ ಕೂಗಲಾರಂಬಿಸಿದರು.

ಮಧ್ಯಾಹ್ನದ ಬೆಳಕಾಗಲೇ ಬಿಜೆಪಿ ಅಭ್ಯರ್ಥಿ ಗೆಲುವು ದೃಢಪಡುತ್ತಿದ್ದಂತೆ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಡೋಲು ಬಡಿದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬಳಿಕ ಇನ್ನಷ್ಟು ಕಾರ್ಯಕರ್ತರೊಂದಿಗೆ ಸೇರಿ ನಗರದ ಅಜಾದ್ ಪಾರ್ಕ್ ಸರ್ಕಲ್ ಹಾಗೂ ಹನುಮಂತಪ್ಪ ವೃತ್ತದಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಜನ ದೇಶದ ಅಭಿವೃದ್ಧಿ ಹಾಗೂ ಹಿತ ದೃಷ್ಟಿಯಿಂದಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸರಳ ಸಜ್ಜನಿಕೆಯ ರಾಜಕಾರಣಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿಯ ಬಲವನ್ನು ಇಮ್ಮಡಿಗೊಳಿಸಿದ್ದಾರೆ. ಗ್ರಾಪಂ ಮಟ್ಟದಿಂದ ಸಚಿವ ಸ್ಥಾನದವರೆಗೂ ಅಧಿಕಾರದ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರಾದ ಮಧುಕುಮಾರ್ ರಾಜ್ ಅರಸ್, ಸಂತೋಷ್ ಕೋಟ್ಯಾನ್, ಕವಿತಾ ಶೇಖರ್, ಜೆಸೆಂತಾ ಅನಿಲ್ ಕುಮಾರ್, ಅಂಕಿತಾ ಮತ್ತಿತರರಿದ್ದರು.

BJP workers celebrate in Chikkamagalur of Kaffinad

About Author

Leave a Reply

Your email address will not be published. Required fields are marked *

You may have missed