September 19, 2024

ಕೊಲ್ಕತ್ತ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ-ಹತ್ಯೆ ಖಂಡಿಸಿ ಆ.24 ರಂದು ನಗರದಲ್ಲಿ ಪ್ರತಿಭಟನೆ

0
ಇನ್ನರ್ ವ್ಹೀಲ್ ಅಧ್ಯಕ್ಷೆ ಶಾಲಿನಿ ನಾಗೇಶ್ ಸುದ್ದಿಗೋಷ್ಠಿ

ಇನ್ನರ್ ವ್ಹೀಲ್ ಅಧ್ಯಕ್ಷೆ ಶಾಲಿನಿ ನಾಗೇಶ್ ಸುದ್ದಿಗೋಷ್ಠಿ

ಚಿಕ್ಕಮಗಳೂರು:  ಕೊಲ್ಕತ್ತ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ.೨೪ ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಇನ್ನರ್ ವ್ಹೀಲ್ ಅಧ್ಯಕ್ಷೆ ಶಾಲಿನಿ ನಾಗೇಶ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿನಿರತ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಕೇಸ್ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಹ ಪ್ರಕರಣವಾಗಿದೆ. ಒಂದರ ಹಿಂದೆ ಒಂದರಂತೆ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಶೋಷಣೆ ಪ್ರಕರಣಗಳು ದಿನನಿತ್ಯ ದೇಶದಲ್ಲಿ ನಡೆಯುತ್ತಲೇ ಇರುವುದು ಆತಂಕದ ಸಂಗತಿಯಾಗಿದೆ ಎಂದರು.

ನಮ್ಮ ಪ್ರತಿಭಟನೆಗೆ ವಿವಿಧ ಪ್ರಗತಿಪರ ಸಂಘ-ಸಂಸ್ಥೆಗಳ ಕಾರ್ಯಕರ್ತರು ಕೈಜೋಡಿಸಲಿದ್ದಾರೆ. ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿನೀಡಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇವೆ. ನಗರದ ಹನುಂಮತಪ್ಪ ವೃತ್ತದಿಂದ ಆಜಾದ್ ಪಾರ್ಕ್‌ನವರೆಗೆ ಶಾಂತಿಯುತವಾಗಿ ಮೆರವಣಿಗೆ ಬಂದು ಅಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಹಲವಾರು ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದು, ಪ್ರಗತಿಪರರು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಇನ್ನರ್ ವ್ಹೀಲ್ ಪದಾಧಿಕಾರಿಗಳಾದ ಕವಿತಾ ನಿಯತ್, ಸಂಗೀತ ಕಾಮತ್, ನಯನಾ ಸಂತೋಷ್, ಶರ್ಮಿಳಾ ಶಶಿಧರ್ ಉಪಸ್ಥಿತರಿದ್ದರು.

Protest in the city on August 24 to condemn the rape-murder of a female doctor in Kolkata

About Author

Leave a Reply

Your email address will not be published. Required fields are marked *

You may have missed