September 16, 2024
ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕುರಿತು ಪೂರ್ವ ಭಾವಿ ಸಭೆ

ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕುರಿತು ಪೂರ್ವ ಭಾವಿ ಸಭೆ

ಚಿಕ್ಕಮಗಳೂರು:  ತಾಲ್ಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂ ಘ-ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನಿಂದ ಸೆ.೨೮ ಮತ್ತು ೨೯ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಸಕ ಹಾಗೂ ಸಮ್ಮೇಳನ ಗೌರವಾಧ್ಯಕ್ಷ ಹೆಚ್.ಡಿ. ತಮ್ಮಯ್ಯ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕುರಿತು ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಶನಿವಾರ ಮಾತನಾಡಿದ ಅವರು ಸಾಹಿತ್ಯಪ್ರೇಮ, ಯುವಪ್ರತಿಭೆಗಳನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮೊದಲು ಆ.೩೧ ರಂದು ನಿಗಧಿಗೊಂಡಿದ್ಧ ದಿನಾಂಕವನ್ನು ಸಮಯಾವಕಾಶದ ಅಭಾವದ ಕಾರಣ ಸೆ.೨೮, ೨೯ ರಂದು ಎರಡು ದಿನಗಳ ಕಾಲ ಹಮ್ಮಿಕೊಳ್ಳಲು ಸಭೆ ನಿರ್ಣಯಿಸಿದೆ. ಅಂದಿನ ಕಾರ್ಯ ಕ್ರಮ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೆರವೇರಿಸಲಿದ್ದು, ಜೊತೆಗೆ ಜಿಲ್ಲೆಯ ಜನ ಪ್ರತಿ ನಿಧಿಗಳು, ಕನ್ನಡಪರ ಸಂಘಟನೆ ಹಾಗೂ ಸಂಘ-ಸಂಸ್ಥೆಗಳನ್ನು ಜೋಡಿಸಿ ಸಮ್ಮೇಳನವನ್ನು ಯಶಸ್ವಿ ಯಾ ಗಿ ಪೂರೈಸುತ್ತೇವೆ ಎಂದರು.

ಪ್ರಸ್ತುತ ತಾಲ್ಲೂಕು ಸಮ್ಮೇಳನ ೧೩ ವರ್ಷಗಳ ನಂತರ ಇದೀಗ ಆಯೋಜನೆಗೊಂಡಿದೆ. ಅಂದಿನ ಕಾರ್ಯಕ್ರಮದಲ್ಲಿ ಸಾಹಿತ್ಯ ಚಟುವಟಿಕೆ, ಚುಟುಕು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಉಪ ನ್ಯಾಸ ಹಾಗೂ ಹೆಸರಾಂತ ಸಾಹಿತಿಗಳನ್ನು ಆಹ್ವಾನಿಸಿ ಎರಡು ದಿನಗಳ ಕಾಲ ಸಾಹಿತ್ಯದ ಕಂಪನ್ನು ಜನತೆಗೆ ಮುಟ್ಟಿ ಸುವ ಕಾರ್‍ಯ ಹಮ್ಮಿಕೊಂಡಿದೆ ಎಂದರು.

ಕಸಾಪ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ ಸಮ್ಮೇಳನ ಅದ್ದೂರಿಯಾಗಿ ಹಮ್ಮಿ ಕೊಳ್ಳುವ ದೃಷ್ಟಿಯಿಂದ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡರೊಂದಿಗೆ ಮಾತುಕತೆ ನಡೆಸಲಾಗಿದ್ದು ಸಂಪೂರ್ಣ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಸಮ್ಮೇಳನ ಸರಾಗವಾಗಿ ನಡೆಯುವ ದೃಷ್ಟಿಯಿಂ ದ ಕ್ಷೇತ್ರದ ಶಾಸಕರು ಅನೇಕ ಚರ್ಚೆಗಳ ಬಳಿಕ ಅಂತಿಮಾಗಿ ದಿನಾಂಕ ನಿಗಧಿಯಾಗಿದೆ. ಸೆ.೨೮ ರಂದು ಸಂಜೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಅಂದು ಸಾಹಿತ್ಯಾನವನ, ಜಾನಪದ, ಗಮಕ, ಕವಿಗೋಷ್ಠಿ ಹಾಗೂ ಬಹಿರಂಗ ಸಮಾರಂಭ ನಡೆಯಲಿದೆ ಎಂದರು.

ತಾಲ್ಲೂಕಿನ ಸಾಧನೆಗೈದ ಅನೇಕರಿಗೆ ಕನ್ನಡಶ್ರೀ, ಸಾಹಿತ್ಯಶ್ರೀ ಪ್ರಶಸ್ತಿ ನೀಡಲಾಗುವುದು. ಹಾಗೂ ಉಳಿ ದಂತೆ ಕಲೆ, ಸಂಗೀತ, ಸಾಹಿತ್ಯದ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು.

ತಾಲ್ಲೂಕು ಕಸಾಪ ಅಧ್ಯಕ್ಷ ಬಿಸಲೇನಹಳ್ಳಿ ಸೋಮೇಖರ ಮಾತನಾಡಿ ಎರಡನೇ ದಿನವಾದ ಸೆ.೨೯ ರಂದು ಗೌರಿಬಿದನೂರಿನ ಪ್ರಾಂಶುಪಾಲ ರಮೇಶಚಂದ್ರದತ್ತ ಸಮಾರೋಪ ಸಮಾರಂಭ ನುಡಿಯುವರು. ಉದ್ಘಾಟನೆ ಮಲ್ಲೇಪುರಂ ಜಿ.ವೆಂಕಟೇಶ್ ನೆರವೇರಿಸುವರು. ಸಮ್ಮೇಳನಾಧ್ಯಕ್ಷರಾಗಿ ಬೆಳವಾಡಿ ಮಂಜು ನಾಥ್ ವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಮಹಿಳಾ ಘಟ ಕದ ತಾಲ್ಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ, ಕಾರ್ಯದರ್ಶಿ ಬಿ.ಆರ್.ಜಗದೀಶ್, ಸ್ವಾಗತ ಸಮಿತಿ ಕೋಶಾಧ್ಯಕ್ಷ ಹೆಚ್.ಸಿ.ನಟರಾಜ್, ಕಸಾಪ ಹೋಬಳಿ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್, ಲಕ್ಯಾ ಅಧ್ಯಕ್ಷ ಶಿವನಂಜೇಗೌಡ, ಕಾರ್ಯದರ್ಶಿ ಹಿರೇಗೌಜ ಶಿವು, ಖಾಂಡ್ಯ ಅಧ್ಯಕ್ಷ ರಾಜಪ್ಪಗೌಡ, ಕನ್ನಡಸೇನೆ ಜಿಲ್ಲಾ ವಕ್ತಾರ ಹುಣಸೇಮಕ್ಕಿ ಲಕ್ಷ್ಮಣ್, ಮುಖಂಡರುಗಳಾದ ಅನ್ವರ್, ವಿ.ಕೆ.ರಘು ಮತ್ತಿತರರು ಹಾಜರಿದ್ದರು.

Preliminary meeting on Taluk Kannada Sahitya Parishad conference at Pravasi Mandir in the city

About Author

Leave a Reply

Your email address will not be published. Required fields are marked *