September 19, 2024

ಕಾಂಗ್ರೆಸ್ ಕಾರ್ಯಕರ್ತರು ನಗರದ ಮಹಾತ್ಮಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ

0
Congress workers staged a silent protest in front of the Mahatma Gandhi statue in the city

Congress workers staged a silent protest in front of the Mahatma Gandhi statue in the city

ಚಿಕ್ಕಮಗಳೂರು:  ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರನ್ನು ಲೋಕಾಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಗರದ ಮಹಾತ್ಮಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ಮಹಾತ್ಮ ಗಾಂಧೀಜಿ ಉದ್ಯಾನವನದಲ್ಲಿನ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಮುಖಂಡರು. ರಾಹುಲ್‌ಗಾಂಧಿ ಸತ್ಯದ ನಡೆಯಲ್ಲಿ ನಮ್ಮ ಹೆಜ್ಜೆ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾ ಗದು. ಇದು ಮಹಾತ್ಮ ಗಾಂಧೀಜಿ ಹುಟ್ಟಿದ ದೇಶದಲ್ಲಿ ಹಿಟ್ಲರ್ ಸಂಸ್ಕೃತಿ ಉಳಿಯುವುದಿಲ್ಲ. ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಬರಹಗಳುಳ್ಳ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|ಕೆ.ಪಿ.ಅಂಶುಮಂತ್, ರೇಖಾಹುಲಿಯಪ್ಪಗೌಡ, ಕೆ.ಮಹಮದ್, ಎಂ. ಎಲ್.ಮೂರ್ತಿ, ಹಿರೇಮಗಳೂರು ರಾಮಚಂದ್ರ, ಬಿ.ಎಚ್.ಹರೀಶ್, ತನೋಜ್‌ಕುಮಾರ್, ಚೇತನ ಸೇರಿದಂತೆ ಅನೇಕರು ಇದ್ದರು.

Congress workers staged a silent protest in front of the Mahatma Gandhi statue in the city

About Author

Leave a Reply

Your email address will not be published. Required fields are marked *

You may have missed