ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷ ಭರತೇಶ್
ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಉದ್ದೇಬೋರನಹಳ್ಳಿಯ ಭರತೇಶ್ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದು ಈ ವಿ?ಯ ತಿಳಿಸಿದ ಅವರು ಜಿಲ್ಲಾ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿರುವ ಕೆಪಿಸಿಸಿ ಕಿಸಾನ್ ಸೆಲ್ ಘಟಕದ ಅಧ್ಯಕ್ಷರಾದ ಸಚಿನ್ ಮೀಗಾ ಹಾಗೂ ರಾಷ್ಟ್ರೀಯ ಕಿಸಾನ್ ಸೆಲ್ ಘಟಕದ ಅಧ್ಯಕ್ಷರಿಗೆ ಮತ್ತು ಪಕ್ಷದ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಿಸಾನ್ ಘಟಕ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಜಿಲ್ಲೆಯ ಕಡೂರು ತಾಲೂಕು, ತರೀಕೆರೆ ತಾಲೂಕು, ಚಿಕ್ಕಮಗಳೂರು ತಾಲೂಕಿನ ಅಂಬಳೆ ಲಕ್ಯಾ ಹೋಬಳಿಗಳಲ್ಲಿ ಬರಗಾಲ ಪೀಡಿತ ಪ್ರದೇಶವೆಂದು ಈಗಾಗಲೇ ಸರ್ಕಾರ ಘೋ?ಣೆ ಮಾಡಿದ್ದು ಈ ಭಾಗದ ರೈತರಿಗೆ ಪರಿಹಾರ ಕೊಡಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
ಪಕ್ಷದಿಂದ ತಮಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಅವರು ಸಧ್ಯದಲ್ಲೇ ರೈತರ ಸಮಾವೇಶ ಆಯೋಜಿಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರುಗಳಾದ ರಾಯಲ್ಶರೀಫ್, ರಾಮೇಗೌಡ, ಸಿದ್ದರಾಮೇಶ್ವರ, ಸುದೀಪ್, ನಾಗೇಶ್, ಸಚಿನ್ ಸಕ್ರೇಪಟ್ಟಣ, ಪ್ರಕಾಶ್ ಸರಪನಹಳ್ಳಿ ಉಪಸ್ಥಿತರಿದ್ದರು.
Bharatesh is the district president of Kisan cell unit of Congress party