ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತೋತ್ಸವ
ಚಿಕ್ಕಮಗಳೂರು: ತಾಲೂಕು ಶಿರವಾಸೆ ಗ್ರಾಮದ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೯ನೇ ಜಯಂತೋತ್ಸವ ಹಾಗೂ ಬಿಲ್ಲವ ಸಂಘದ ೨೫ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ: ೧೬-೧೦-೨೦೨೩ನೇ ಸೋಮವಾರ ಬೆಳಗ್ಗೆ ೧೧ ಗಂಟೆಗೆ ಶಿರವಾಸೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಹಂತದಲ್ಲಿರುವ ಬಿಲ್ಲವ ಸಮುದಾಯದ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ವಾಸು ಪೂಜಾರಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ಎಂ ಸತೀಶ್ ಉದ್ಘಾಟಿಸಲಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಶಿರವಾಸೆ ಬಿಲ್ಲವ ಸಂಘದ ಅಧ್ಯಕ್ಷ ಯು.ಸಂಜೀವ ಅಮೀನ್ ವಹಿಸಲಿದ್ದಾರೆ ಎಂದರು.
ಜಿಲ್ಲಾ ಒಕ್ಕೂಟದ ಗೌರವಾಧ್ಯಕ್ಷ ಪಿ.ಆರ್ ಸದಾಶಿವ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಕೆ.ಸಿ ಶಾಂತಕುಮಾರ್, ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪು?ರ್ಚನೆ ಮಾಡಲಿದ್ದಾರೆ, ಟಿ.ಎಲ್ ಉಮೇಶ್ ಶಿಶು ಅಭಿವೃದ್ಧಿ ಅಧಿಕಾರಿಗಳು ಬೇಲೂರು ಶ್ರೀ ನಾರಾಯಣ ಗುರುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಈ ಸಮಾರಂಭದಲ್ಲಿ ಕೇಂದ್ರೀಯ ಕಾಫಿ ಮಂಡಳಿ ಮಂಡಳಿಯ ಸದಸ್ಯ ಬಿ.ಎನ್ ಭಾಸ್ಕರ್ ವೆನಿಲ್ಲಾ ಇವರನ್ನು ಸನ್ಮಾನಿಸಲಾಗುವುದು ಈ ಸಮಾರಂಭದಲ್ಲಿ ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಕೆ.ಸಿ ಗುಣಶೇಖರ್ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್ ಜಿಲ್ಲಾ ನಾರಾಯಣ ಗುರು ಸಮಿತಿಯ ಅಧ್ಯಕ್ಷ ಎಂ ಕೃ?ಪ್ಪ ಜಿಲ್ಲೆಯ ಎಲ್ಲಾ ತಾಲೂಕಿನ ಆರ್ಯ ಈಡಿಗ ಸಂಘ ಬಿಲ್ಲವ ಸಂಘ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವ ಸಂಘಗಳ ಅಧ್ಯಕ್ಷರುಗಳ ಮಾಜಿ ಅಧ್ಯಕ್ಷರುಗಳು ಹೋಬಳಿ ಸಂಘಗಳ ಅಧ್ಯಕ್ಷರುಗಳು ಗ್ರಾಮ ಸಂಘಗಳ ಅಧ್ಯಕ್ಷರುಗಳು ಜಿಲ್ಲೆಯ ಸಮಾಜದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಮಾರ್ಚ್ ೨೦೨೪ ರಂದು ನಡೆಯಲ್ಲಿರುವ ಬಿಲ್ಲವ ಸಮಾಜ ಸೇವ ಸಂಘದ ಬೆಳ್ಳಿ ಹಬ್ಬ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳು ನಡೆಯುತ್ತಿದೆ ಎಂದರು.
169th birth anniversary of Brahmashree Narayana Guru