ಪಹಣಿ ಲೋಪ ದೋಷ ಸರಿಪಡಿಸಲು ನಿರ್ಲಕ್ಷ್ಯ ಪ್ರತಿಭಟನೆ
ಚಿಕ್ಕಮಗಳೂರು: ಪಹಣಿ ಹಾಗೂ ಭೂದಾಖಲೆಗಳ ಲೋಪದೋಸಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಕ್ರಮ ಕೈಗೊಳ್ಳದೆ ನಿರ್ಲಕ್ಷ ಧೋರಣೆ ತಾಳಿದೆ ಎಂದು ಆರೋಪಿಸಿ ರೈತ ಸಂಘದ ಮುಖಂಡ ಎಂ.ಮಂಜುನಾಥ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ನಿರತ ಮಂಜುನಾಥ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆದಾಗಿನಿಂದ ರೈತರ ಜಮೀನಿನ ಪಹಣಿ ಮತ್ತು ಪೋಡಿ ಲೋಪದೋ?ಗಳನ್ನು ಸರಿಪಡಿಸುವಂತೆ ಅನೇಕ ಬಾರಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಇತ್ತೀಚೆಗೆ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಕಂದಾಯ ಮಂತ್ರಿಗಳು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ರೈತರು ಹಾಗೂ ಸಾರ್ವಜನಿಕರ ಕೆಲಸ ಮಾಡದ ಅಧಿಕಾರಿಗಳ ಮೇಲೆ ಚಾಟಿ ಬೀಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಿದ್ದರೂ ಅಧಿಕಾರಿಗಳು ಮೌನವಾಗಿರುವುದರಿಂದ ಭೂ ದಾಖಲೆಗಳ ಲೋಪದೋ?ಗಳಿಂದ ರೈತರ ಮೇಲೆ ಚಾಟಿ ಬೀಸಿದಂತಾಗುತ್ತಿದೆ. ಇನ್ನಾದರೂ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಇನ್ನೋರ್ವ ರೈತ ಮುಖಂಡ ಪುಟ್ಟಸ್ವಾಮಿಗೌಡ ಇದ್ದರು.
Negligence protest to correct Pahanilopa defect