September 19, 2024

ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮನವಿ ಪತ್ರ ಸಲ್ಲಿಕೆ

0
ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮನವಿ ಪತ್ರ ಸಲ್ಲಿಕೆ

ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮನವಿ ಪತ್ರ ಸಲ್ಲಿಕೆ

ಚಿಕ್ಕಮಗಳೂರು: ತಮ್ಮ ಮನವಿಗೆ ಯಾರು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.ಸಿ ಕಚೇರಿಯ ಮಹಾತ್ಮ ಗಾಂಧಿ ಪ್ರತಿಮೆಗೆ ಮನವಿಯನ್ನು ಸಲ್ಲಿಸಿದ್ದಾರೆ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮಂಜುನಾಥ್. ಕಂದಾಯ ಇಲಾಖೆಯ ಪಹಣಿ ತಿದ್ದುಪಡಿ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರು

ಕ್ಯಾರೇ ಎನ್ನದ ಜಿಲ್ಲಾಡಳಿತದ ಬಗ್ಗೆ ಅಸಮಾಧಾನ ಗೊಂಡ ರೈತ ಮುಖಂಡನೊಬ್ಬ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಒಳಗಿರುವ ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಆದರೆ ಗಾಂಧೀಜಿ ಪ್ರತಿಮೆ ಬಳಿ ತೆರಳಲು ಮಂಜುನಾಥ್ ಅವರಿಗೆ ಪೊಲೀಸರು ಅವಕಾಶ ಕೊಡದ ಕಾರಣ ಕೆಲಕಾಲ ಹೈಡ್ರಾಮ ಸಹಾ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಿತು. ಕೊನೆಗೆ ಕೆಲಕಾಲ ಗಾಂಧಿ ಪ್ರತಿಮೆ ಬಳಿ ನಿಂತು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲು ಅನುವು ಮಾಡಿಕೊಡಲಾಯಿತು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಪಹಣಿ ದೋಷಮುಕ್ತ ರಾಜ್ಯ ಮಾಡುತ್ತೆವೆ ಎನ್ನುತ್ತಾರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆದರೆ ಅದು ಸಾಧ್ಯವಿಲ್ಲ, ಅಧಿಕಾರಿಗಳು ಅದಕ್ಕೆ ಬಿಡುವುದಿಲ್ಲ ಎಂದರು.

ರಾಜ್ಯ ಸರ್ಕಾರದ ಜನತಾದರ್ಶನ ಒಂದು ಬೋಗಸ್ ಕಾರ್ಯಕ್ರಮ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮಂಜುನಾಥ್ ಅವರಿಂದ ಮನವಿ ಸ್ವೀಕರಿಸಿ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Petition letter submission for the statue of Father of the Nation Mahatma Gandhi

About Author

Leave a Reply

Your email address will not be published. Required fields are marked *

You may have missed