September 20, 2024

ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ಬಿ.ರಾಜಪ್ಪ ನೇಮಕ

0
ಬಿ.ರಾಜಪ್ಪ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಮುಖಂಡ ನಗರದ ಬಿ.ರಾಜಪ್ಪ ನೇಮಕಗೊಂಡಿದ್ದಾರೆ.

ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯಲ್ಲಿ ರಾಜಪ್ಪ ಅವರಿಗೆ ನೇಮಕಾತಿ ಆದೇಶದ ಪತ್ರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ಆರ್.ರಘು (ಕೌಟಿಲ್ಯ) ಅವರು ನೀಡಿದರು.

ರಾಜಪ್ಪ ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ಬಿಜೆಪಿಯಲ್ಲಿ ವಿವಿಧ ಹಂತಗಳಲ್ಲಿ ಅನೇಕ ಜವಬ್ದಾರಿಗಳನ್ನು ನಿರ್ವಹಿಸಿದ್ದರು. ಜೊತೆಗೆ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

BJP appoints B. Rajappa as State Secretary for Backward Classes

About Author

Leave a Reply

Your email address will not be published. Required fields are marked *