ಫೆ.18 ಕ್ಕೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ 8ನೇ ವರ್ಷದ ವಾರ್ಷಿಕೋತ್ಸವ
ಚಿಕ್ಕಮಗಳೂರು: ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ೭ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.೧೮ ರಂದು ಕುವೆಂಪುಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ಸಿ.ಎಸ್.ಪುಷ್ಪಾರಾಜೇಂದ್ರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ೨೦೨೨-೨೦೨೩ನೇ ಸಾಲಿನಲ್ಲಿ ೧೦ನೇ ತರಗತಿ ಮತ್ತು ಪಿಯುಸಿಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿಯ ವೀರಭೀಕ್ಷಾವರ್ತಿ ನೀಲಕಂಠಮಠದ ಶ್ರೀ ೧೦೦೮ ಶ್ರೀ ಶಿವಶಂಕರಶಿವಾಚಾರ್ಯ ಸ್ವಾಮೀಜಿ ಇವರ ಆಶೀರ್ವಾದದೊಂದಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಹೆಚ್.ಡಿ.ತಮ್ಮಯ್ಯ, ಬೆಂಗಳೂರು ವಿಧಾನಪರಿಷತ್ ಸದಸ್ಯ ಎಸ್.ಕೇಶವಪ್ರಸಾದ್, ಮಾಜಿ ಸಚಿವ ಸಿ.ಟಿ.ರವಿ, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್, ವಿಧಾನಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿಶಾಂತೇಗೌಡ ಭಾಗವಹಿಸುವರು ಎಂದರು.
ನಗರಸಭೆ ಅಧ್ಯಕ್ಷ ವರಸಿದ್ದಿವೇಣುಗೋಪಾಲ್, ಕೇಂದ್ರ ಕುರುಹಿನಶೆಟ್ಟಿ ಸಂಘದ ಉಪಾಧ್ಯಕ್ಷ ಜಿ.ಟಿ.ಸೋಮಶೇಖರ್, ನೀಲಕಂಠೇಶ್ವರ ಕುರುಹಿನಶೆಟ್ಟಿ ಸಂಘದ ಅಧ್ಯಕ್ಷ ಸಿ.ಹೆಚ್.ಇಂದುಕುಮಾರ್, ವಕೀಲ ಬಿ.ಎಸ್.ಪ್ರಶಾಂತ್, ತರೀಕೆರೆ ಕುರುಹಿನಶೆಟ್ಟಿ ಸಂಘದ ಮಾಜಿ ಅಧ್ಯಕ್ಷ ಟಿ.ಇ.ವೆಂಕಟೇಶ್ ಪಾಲ್ಗೊಳ್ಳುವರೆಂದು ಹೇಳಿದರು.
ಸಭೆ, ಸಮಾರಂಭ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘಕ್ಕೆ ನಿವೇಶನ ನೀಡಲು ನಗರಸಭೆ ಮುಂದಾಗಬೇಕು. ಶಾಸಕರು ಮತ್ತು ಸಂಸದರು ಈ ಕುರಿತು ಹೆಚ್ಚಿನ ಗಮನ ಹರಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ಪದಾಧಿಕಾರಿಗಳಾದ ಪದ್ಮಾಮಹೇಶ್, ಗೌರವಾಧ್ಯಕ್ಷೆ ಚಂದ್ರಾವತಿ ಶಂಕರ್, ಗೀತಾ, ಪ್ರಿಯಪರಮೇಶ್ ಇದ್ದರು.
8th year anniversary of Zilla Kuruhinashetty Mahila Sangh on 18th Feb