ಮಾ.10ಕ್ಕೆ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ
ಚಿಕ್ಕಮಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳು ತುಳಿತಕ್ಕೊಳಗಾಗಿದ್ದು ಈ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಮಾ.೧೦ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಬಿಜೆಪಿ ಕಛೇರಿ ಪಾಂಚಜನ್ಯದಲ್ಲಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ನಂದೀಶ್ ಮದಕರಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ಸಮಾವೇಶದ ಪೂರ್ವ ತಯಾರಿಯಾಗಿ ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ೯ ಮಂಡಲಗಳು ಹಲವು ಕಾರ್ಯಕ್ರಮ ನಡೆಸಿದ್ದು ಹೆಚ್ಚಿನ ಸಂಖ್ಯೆ ಸಮುದಾಯದ ಬಂಧುಗಳು ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪರಿಶಿಷ್ಟ ಪಂಗಡಗಳಿಗೆ ಇರುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಿಪಿಟಿಯ ಮೂಲಕ ತಿಳಿಸಲಾಗುವುದು. ಈ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷರಾದ ಎಸ್.ಟಿ.ಮೋರ್ಚಾ ಬಂಗಾರು ಹನುಮಂತು ಮತ್ತು ಮಾಜಿ ಸಚಿವರಾದ ಶ್ರೀರಾಮುಲು, ರಾಜು ಗೌಡ್ರು, ಜಿಲ್ಲಾಧ್ಯಕ್ಷರಾದ ಎಂ.ಆರ್.ದೇವರಾಜ ಶೆಟ್ಟಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲೆಯ ಮಾಜಿ ಶಾಸಕರುಗಳಾದ ಬೆಳ್ಳಿ ಪ್ರಕಾಶ್, ಡಿ.ಎಸ್ ಸುರೇಶ್, ಡಿ.ಎನ್ ಜೀವರಾಜ್ ಹಾಗೂ ನೂತನವಾಗಿ ಆಯ್ಕೆಯಾದ ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ ನಂದೀಶ್ ಮದಕರಿ ಅವರು ಅಧ್ಯಕ್ಷತೆ ವಹಿಸುವರು ಎಂದರು.
ಎಲ್ಲಾ ಬಿಜೆಪಿಯ ಕಾರ್ಯಕರ್ತ ಬಂಧುಗಳು ತಪ್ಪದೇ ಈ ಒಂದು ಕಾರ್ಯಕ್ರಮಕ್ಕೆ ಹಾಜರಾಗಬೇಕಾಗಿ ಈ ಮೂಲಕ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಧುಕುಮಾರ್, ಶಂಕರ್ ಮಡೆನೂರ್, ಮಧುಕುಮಾರ್ ಉಪಸ್ಥಿತರಿದ್ದರು.
Advance Conference of Scheduled Tribes at District BJP Office