Foundation laying for box drain works: ಬಾಕ್ಸ್ ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ
ಚಿಕ್ಕಮಗಳೂರುಎಕ್ಸ್ಪ್ರೆಸ್: ಹಿರೇಮಗಳೂರಿನ ವಾರ್ಡ್ ನಂ. ೪ ರಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಯನ್ನು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ನೆರೆವೇರಿಸಿದರು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಸಾರ್ವಜನಿಕರ ಹಿತದೃಷ್ಟಿಯಿಂದ, ಚರಂಡಿ ನೀರು ಸರಾಗವಾಗಿ ಹರಿಯಲು ಬಾಕ್ಸ್ ಚರಂಡಿ ನಿರ್ಮಾಣ ಮಾಡಲು ಇಂದು ಚಾಲನೆ ನೀಡಿದ್ದು, ಈ ಕಾಮಗಾರಿಗೆ ೫ ಲಕ್ಷ ರೂಗಳನ್ನು ಮೀಸಲಿಡಲಾಗಿದೆ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವುದರ ಜತೆಗೆ ನಗರವು ಸುಂದರವಾಗಿ ಕಾಣಲಿದೆ, ನಗರದ ಎಲ್ಲಾ ದಿಕ್ಕುಗಳಲ್ಲಿಯೂ ಅಭಿವೃದ್ಧಿ ಕೆಲಸಗಳು ನಡೆಯುತ್ತಲಿವೆ, ಎಂ.ಜಿ ರಸ್ತೆಯಲ್ಲಿ ಇಂಟರ್ಲಾಕ್ ಕಾಮಗಾರಿ ನಡೆಯುತ್ತಿದ್ದು, ಜನವರಿ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ವಿದ್ಯಾ ಬಸವರಾಜ್, ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ, ಸಿಡಿಎ ಸದಸ್ಯ ರಾಜ್ಕುಮಾರ್, ನಗರಸಭೆ ಆಯುಕ್ತರಾದ ಬಸವರಾಜ್, ಇಂಜಿನಿಯರ್ ಚಂದನ್, ರಶ್ಮಿ, ಸ್ಥಳಿಯರಾದ ಕೇಶವಮೂರ್ತಿ, ರೇವನಾಥ್ ಇತರರು ಉಪಸ್ಥಿತರಿದ್ದರು.
Foundation laying for box drain works