There was a lot of celebration at the Om Shakti temple: ನಗರದ ಶ್ರೀ ಓಂ ಶಕ್ತಿ ದೇಗುಲದಲ್ಲಿ ಸಂಭ್ರಮದ ಹಿರುಮುಡಿ ಕಾರ್ಯಕ್ರಮ
ಚಿಕ್ಕಮಗಳೂರುಎಕ್ಸ್ಪ್ರೆಸ್: ನಗರದ ಮಾರ್ಕೆಟ್ ರಸ್ತೆಯ ಶ್ರೀ ಮೇಲ್ ಮರುವತ್ತುರು ಆಧಿಪರಾಶಕ್ತಿ ಭಕ್ತ ಮಂಡಳಿ ವತಿಯಿಂದ ಓಂ ಶಕ್ತಿ ಅಮ್ಮನವರ ದೇವಾಲಯದಲ್ಲಿ ೩೫ ನೇ ವರ್ಷದ ತೈಪೂಜಾ ಕಾರ್ಯಕ್ರಮದ ಅಂಗವಾಗಿ ಹಿರುಮುಡಿ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಮುತ್ತಯ್ಯ ಮಾತನಾಡಿ ದೇಶಕ್ಕೆ ಮತ್ತು ಚಿಕ್ಕಮಗಳೂರು ಜನತೆಗೆ ಒಳ್ಳೆಯದಾಗಲೆಂದು ವಿಶೇಷವಾಗಿ ಓಂ ಶಕ್ತಿ ಅಮ್ಮನವರ ಪೂಜಾ ಕಾರ್ಯಕ್ರಮವನ್ನು ಮಾಡಲಾಗಿದೆ ಭಕ್ತಾದಿಗಳು ಉತ್ತಮ ರೀತಿಯಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿ, ದೇವರ ದರ್ಶನವನ್ನು ಮಾಡಲಿದ್ದಾರೆ, ಇಂದು ಹಿರುಮುಡಿ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಬಹಳಷ್ಟು ಅದ್ಧೂರಿಯಿಂದ ಮಾಡಲಾಗುತ್ತಿತ್ತ್ಲು ಹೋಮ, ಹವನಗಳ ಮೂಲಕ ಹಿರುಮುಡಿಯ ಕಾರ್ಯಕ್ರಮವನ್ನು ಸಾಂಪ್ರಾದಾಯಿಕವಾಗಿ ಆಚರಿಸಲಾಗಿದೆ ಎಲ್ಲ ಜನರ ಕಷ್ಟಗಳು ನಿವಾರಣೆಯಾಗಲಿ ತದ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ್ತಷ್ಟು ಸಂಭ್ರಮದಿಂದ ಆಚರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ಸಿ.ಟಿ.ರವಿ, ಗುರುಸ್ವಾಮಿ ನಾಗಣ್ಣ, ಶಂಕರ್ಲಿಂಗಮ್, ಸುರೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
There was a lot of celebration at the Om Shakti temple