MLA CT Ravi drives for walkathon: ವಾಕಥಾನ್ಗೆ ಶಾಸಕ ಸಿ.ಟಿ.ರವಿ ಚಾಲನೆ
ಚಿಕ್ಕಮಗಳೂರುಎಕ್ಸ್ಪ್ರೆಸ್: ಜೀವನದಲ್ಲಿ ಪ್ರತಿಯೊಬ್ಬರು ಮುಂದೆ ಬರಬೇಕು ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಉತ್ಸವದ ಅಂಗವಾಗಿ ಇಂದು ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು
ಪ್ರತಿಯೊಬ್ಬರಿಗೂ ಜೀವನದಲ್ಲಿ ಮುಂದೆ ಬರಬೇಕು ಎಂಬ ಆಪೇಕ್ಷೆ ಸ್ವಾಭಾವಿಕವಾಗಿ ಇರುತ್ತದೆ, ಎಲ್ಲರೂ ಮುಂದೆ ಬಂದರೆ ಸ್ವಾಭಾವಿಕವಾಗಿ ದೇಶ ಮುಂದೆ ಬರುತ್ತದೆ ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ ಭಾರತ ಎಂದು ಹೇಳಿದರು. ದೇಶದ ಪ್ರತಿ ಪ್ರಜೆಯು ಮುಂದೆ ಬಂದರೆ ೧೩೮ ಕೋಟಿ ಹೆಜ್ಜೆ ದೇಶ ಮುಂದೆ ಹೋಗುತ್ತದೆ ಎರಡು ಹೆಜ್ಜೆ ಮುಂದೆ ಹೋದರೆ ಅದು ೨೭೬ ಕೋಟಿ ಹೆಜ್ಜೆ ಮುಂದೆ ಹೋಗುತ್ತದೆ ನಮ್ಮ ಬದುಕಿನಲ್ಲಿ ಎಷ್ಟು ಹೆಜ್ಜೆ ಮುಂದೆ ಹೋಗುತ್ತೇವೆಯೋ ಅಷ್ಟು ಹೆಜ್ಜೆ ನಮ್ಮ ದೇಶ ಮುಂದೆ ಹೋಗುತ್ತದೆ. ಈ ರೀತಿ ಜೀವನದಲ್ಲಿ ಪ್ರತಿಯೊಬ್ಬರು ಮುಂದೆ ಬರೋಣ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ ನಮ್ಮ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷತೆಯಿದೆ, ಹಬ್ಬ ಎಂದರೆ ಮನಸ್ಸುಗಳನ್ನು ಬೆಸೆಯುವ ಕಾರ್ಯಕ್ರಮ ಹಿಂದೆ ಹಬ್ಬ ಹರಿದಿನಗಳಲ್ಲಿ ಎಲ್ಲರೂ ಒಂದೆಡೆ ಸೇರುತ್ತಿದ್ದರು, ಸಂಬಂಧಗಳನ್ನು ಬೆಳೆಸುವ ಕೆಲಸವಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲೋ ಒಂದು ಕಡೆ ಹಿಂದಿನ ವ್ಯವಸ್ಥೆ ಮಾಯವಾಗಿರುವುದನ್ನು ಕಾಣುತ್ತೇವೆ ಎಂದ ಅವರು ಚಿಕ್ಕಮಗಳೂರು ಉತ್ಸವ-೨೦೨೩ಕ್ಕೆ ಹೆಚ್ಚು ಜನರು ಭಾಗವಹಿಸುವ ಮೂಲಕ ಹಬ್ಬದ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿನಗರಸಭಾ ಅಧ್ಯಕ್ಷ ವರಸಿದ್ದಿವೇಣುಗೋಪಾಲ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಉಪವಿಭಾಗಾಧಿಕಾರಿ ರಾಜೇಶ್ ಮುಂತಾದವರು ಉಪಸ್ಥಿತರಿದ್ದರು.
MLA CT Ravi drives for walkathon