September 19, 2024

ಇಂದು ನಗರದಲ್ಲಿ ಶಕ್ತಿ ಯೋಜನೆ ಚಾಲನೆ

0
ಶಕ್ತಿ ಯೋಜನೆಗೆ

ಶಕ್ತಿ ಯೋಜನೆಗೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಚಿಕ್ಕಮಗಳೂರು ವಿಭಾಗ, ಚಿಕ್ಕಮಗಳೂರು ವತಿಯಿಂದ ಭಾನುವಾರ 11 ರಂದು ಮಧ್ಯಾಹ್ನ 02.೦೦ ಗಂಟೆಗೆ ನಗರದ ಬಸ್ ನಿಲ್ದಾಣ ಆವರಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಘನ ಉಪಸ್ಥಿತರಿರಲಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಘನ ಉಪಸ್ಥಿತರಿರುವರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸುವರು.

ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಟಿ.ಡಿ. ರಾಜೇಗೌಡ, ಜಿ.ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

Shakti project launched in the city today

About Author

Leave a Reply

Your email address will not be published. Required fields are marked *

You may have missed